ಲಾಲ್ಬಾಗ್ ಪಶ್ಚಿಮದ್ವಾರದ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಸಾಗುವ ವಾಹನಗಳು ಸರ್ವಿಸ್ ರಸ್ತೆಯ ಮೂಲಕ ನ್ಯಾಷನಲ್ ಕಾಲೇಜು ಜಂಕ್ಷನ್ನಲ್ಲಿ ಕೆ.ಆರ್. ರಸ್ತೆಗೆ ಸಂಪರ್ಕ ಸಾಧಿಸಬೇಕಿದೆ. ಆದರೆ, ಗುಂಡಿಗಳಿಂದ ಕೂಡಿದ್ದ ಸರ್ವಿಸ್ ರಸ್ತೆಯಲ್ಲಿ ಸಾಗಲು ವಾಹನ ಸವಾರರು ಹರಸಾಹಸ ಪಡಬೇಕಿತ್ತು. ಈ ಸಮಸ್ಯೆಯ ಬಗ್ಗೆ ‘ಪ್ರಜಾವಾಣಿ’ ನ.28ಕ್ಕೆ ‘ಶಾಸಕರ ಕಚೇರಿ ಎದುರೇ ಗುಂಡಿ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಶಾಸಕರು ಗುಂಡಿಗಳನ್ನು ಮುಚ್ಚಿಸಿದ್ದು, ‘ಶೀಘ್ರದಲ್ಲೇ ಹೊಸದಾಗಿ ಡಾಂಬರೀಕರಣ ಮಾಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.