<p><strong>ಪೀಣ್ಯ ದಾಸರಹಳ್ಳಿ</strong>: ನಾಗಸಂದ್ರ ಮೆಟ್ರೊ ಸ್ಟೇಷನ್ ಪ್ರವೇಶ ದ್ವಾರದದ(ಮಂಜುನಾಥನಗರದ ಕಡೆ ಹೋಗುವ ದಾರಿ) ಪಕ್ಕದಲ್ಲಿನ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದೆ.</p>.<p>ಐದು ದಿನಗಳ ಹಿಂದೆ ಭಾರಿ ವಾಹನವೊಂದು ಈ ದಾರಿಯಲ್ಲಿ ಚಲಿಸಿದ ಮೇಲೆ ರಸ್ತೆ ಕುಸಿದಿದೆ. ಡಾಂಬರು ಸಹಿತ ಕುಸಿದಿದೆ. ಇವತ್ತಿನವರೆಗೂ ಅದನ್ನು ದುರಸ್ತಿ ಮಾಡಿಲ್ಲ. ಬದಲಿಗೆ, ಗುಂಡಿಯ ಸುತ್ತ, ಕಲ್ಲು ಇಟ್ಟು, ದಾರ ಕಟ್ಟಲಾಗಿದೆ. ಇದರಿಂದ ಮೆಟ್ರೊ ರೈಲು ನಿಲ್ದಾಣಕ್ಕೆ ಬಂದು ಹೋಗುವವರಿಗೆ ತುಂಬಾ ತೊಂದರೆಯಾಗುತ್ತಿದೆ.</p>.<p>’ನೀರಿನ ಸಂಪರ್ಕಕ್ಕಾಗಿ ಪೈಪ್ ಅಳವಡಿಸಲು ಈ ಭಾಗದಲ್ಲಿ ಗುಂಡಿ ತೆಗೆದಿದ್ದು, ಕಾಮಗಾರಿ ಮುಗಿದ ಮೇಲೆ ಸಮರ್ಪಕವಾಗಿ ಮುಚ್ಚಿ ರಸ್ತೆ ಮಾಡದ ಕಾರಣ, ಹೀಗೆ ಗುಂಡಿ ಬಿದ್ದಿದದೆ. ಬಿಡಬ್ಲ್ಯುಎಸ್ಎಸ್ಬಿ ಅಧಿಕಾರಿಗಳು ಗುಂಡಿ ಮುಚ್ಚದೇ ನಿರ್ಲಕ್ಷ್ಯವಹಿಸಿದ್ದಾರೆ’ ಎಂದು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.</p>.<p>‘ಜಲ ಮಂಡಳಿಯವರು ಪೈಪ್ ಒಡೆದಾಗ ಬಂದು ರಿಪೇರಿ ಮಾಡಿದರು. ನಂತರ ಹಾಗೆ ಬಿಟ್ಟು ಹೋಗಿದ್ದಾರೆ. ಮತ್ತೆ ಈ ಕಡೆ ತಲೆ ಹಾಕಿಲ್ಲ. ಇಲ್ಲಿ ಆಟೊ ನಿಲ್ಲಿಸಕ್ಕೂ ಜಾಗವಿಲ್ಲ. ಮೂರು ಅಡಿ ಆಳಗುಂಡಿ ಇದೆ. ದ್ವಿಚಕ್ರ ವಾಹನ ಸವಾರರು ಭಯದಿಂದ ವಾಹನ ಚಲಿಸುತ್ತಾರೆ. ಆದಷ್ಟು ಬೇಗ ದುರಸ್ತಿ ಮಾಡಬೇಕು’ ಎಂದು ಆಟೊ ಚಾಲಕ ಈರಣ್ಣ ಆಗ್ರಹಿಸಿದ್ದಾರೆ.</p>.<p><strong>ಸರಿಪಡಿಸುತ್ತೇವೆ: ಜಲಮಂಡಳಿ</strong> </p><p>ಮೆಟ್ರೊ ನಿಲ್ದಾಣದ ಮುಂಭಾಗದಲ್ಲಿ ನೀರಿನ ಪೈಪ್ ಒಡೆದಿತ್ತು. ಅದನ್ನು ಸರಿಪಡಿಸಿದ್ದೇವೆ. ಪೈಪ್ ಅನ್ನು ಇನ್ನೊಂದು ಕಡೆಗೆ ನೇರ ಸಂಪರ್ಕ ಕಲ್ಪಿಸಬೇಕು. ಅದಕ್ಕಾಗಿ ಹಾಗೆ ಬಿಟ್ಟಿದ್ದೇವೆ. ಶೀಘ್ರವೇ ಗುಂಡಿಯನ್ನು ಮುಚ್ಚಿ ಸರಿಪಡಿಸುತ್ತೇವೆ’ ಎಂದು ಜಲಮಂಡಳಿ ಎಂಜಿನಿಯರ್ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ</strong>: ನಾಗಸಂದ್ರ ಮೆಟ್ರೊ ಸ್ಟೇಷನ್ ಪ್ರವೇಶ ದ್ವಾರದದ(ಮಂಜುನಾಥನಗರದ ಕಡೆ ಹೋಗುವ ದಾರಿ) ಪಕ್ಕದಲ್ಲಿನ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದೆ.</p>.<p>ಐದು ದಿನಗಳ ಹಿಂದೆ ಭಾರಿ ವಾಹನವೊಂದು ಈ ದಾರಿಯಲ್ಲಿ ಚಲಿಸಿದ ಮೇಲೆ ರಸ್ತೆ ಕುಸಿದಿದೆ. ಡಾಂಬರು ಸಹಿತ ಕುಸಿದಿದೆ. ಇವತ್ತಿನವರೆಗೂ ಅದನ್ನು ದುರಸ್ತಿ ಮಾಡಿಲ್ಲ. ಬದಲಿಗೆ, ಗುಂಡಿಯ ಸುತ್ತ, ಕಲ್ಲು ಇಟ್ಟು, ದಾರ ಕಟ್ಟಲಾಗಿದೆ. ಇದರಿಂದ ಮೆಟ್ರೊ ರೈಲು ನಿಲ್ದಾಣಕ್ಕೆ ಬಂದು ಹೋಗುವವರಿಗೆ ತುಂಬಾ ತೊಂದರೆಯಾಗುತ್ತಿದೆ.</p>.<p>’ನೀರಿನ ಸಂಪರ್ಕಕ್ಕಾಗಿ ಪೈಪ್ ಅಳವಡಿಸಲು ಈ ಭಾಗದಲ್ಲಿ ಗುಂಡಿ ತೆಗೆದಿದ್ದು, ಕಾಮಗಾರಿ ಮುಗಿದ ಮೇಲೆ ಸಮರ್ಪಕವಾಗಿ ಮುಚ್ಚಿ ರಸ್ತೆ ಮಾಡದ ಕಾರಣ, ಹೀಗೆ ಗುಂಡಿ ಬಿದ್ದಿದದೆ. ಬಿಡಬ್ಲ್ಯುಎಸ್ಎಸ್ಬಿ ಅಧಿಕಾರಿಗಳು ಗುಂಡಿ ಮುಚ್ಚದೇ ನಿರ್ಲಕ್ಷ್ಯವಹಿಸಿದ್ದಾರೆ’ ಎಂದು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.</p>.<p>‘ಜಲ ಮಂಡಳಿಯವರು ಪೈಪ್ ಒಡೆದಾಗ ಬಂದು ರಿಪೇರಿ ಮಾಡಿದರು. ನಂತರ ಹಾಗೆ ಬಿಟ್ಟು ಹೋಗಿದ್ದಾರೆ. ಮತ್ತೆ ಈ ಕಡೆ ತಲೆ ಹಾಕಿಲ್ಲ. ಇಲ್ಲಿ ಆಟೊ ನಿಲ್ಲಿಸಕ್ಕೂ ಜಾಗವಿಲ್ಲ. ಮೂರು ಅಡಿ ಆಳಗುಂಡಿ ಇದೆ. ದ್ವಿಚಕ್ರ ವಾಹನ ಸವಾರರು ಭಯದಿಂದ ವಾಹನ ಚಲಿಸುತ್ತಾರೆ. ಆದಷ್ಟು ಬೇಗ ದುರಸ್ತಿ ಮಾಡಬೇಕು’ ಎಂದು ಆಟೊ ಚಾಲಕ ಈರಣ್ಣ ಆಗ್ರಹಿಸಿದ್ದಾರೆ.</p>.<p><strong>ಸರಿಪಡಿಸುತ್ತೇವೆ: ಜಲಮಂಡಳಿ</strong> </p><p>ಮೆಟ್ರೊ ನಿಲ್ದಾಣದ ಮುಂಭಾಗದಲ್ಲಿ ನೀರಿನ ಪೈಪ್ ಒಡೆದಿತ್ತು. ಅದನ್ನು ಸರಿಪಡಿಸಿದ್ದೇವೆ. ಪೈಪ್ ಅನ್ನು ಇನ್ನೊಂದು ಕಡೆಗೆ ನೇರ ಸಂಪರ್ಕ ಕಲ್ಪಿಸಬೇಕು. ಅದಕ್ಕಾಗಿ ಹಾಗೆ ಬಿಟ್ಟಿದ್ದೇವೆ. ಶೀಘ್ರವೇ ಗುಂಡಿಯನ್ನು ಮುಚ್ಚಿ ಸರಿಪಡಿಸುತ್ತೇವೆ’ ಎಂದು ಜಲಮಂಡಳಿ ಎಂಜಿನಿಯರ್ ನಾಗರಾಜ್ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>