ಐದು ದಿನಗಳ ಹಿಂದೆ ಭಾರಿ ವಾಹನವೊಂದು ಈ ದಾರಿಯಲ್ಲಿ ಚಲಿಸಿದ ಮೇಲೆ ರಸ್ತೆ ಕುಸಿದಿದೆ. ಡಾಂಬರು ಸಹಿತ ಕುಸಿದಿದೆ. ಇವತ್ತಿನವರೆಗೂ ಅದನ್ನು ದುರಸ್ತಿ ಮಾಡಿಲ್ಲ. ಬದಲಿಗೆ, ಗುಂಡಿಯ ಸುತ್ತ, ಕಲ್ಲು ಇಟ್ಟು, ದಾರ ಕಟ್ಟಲಾಗಿದೆ. ಇದರಿಂದ ಮೆಟ್ರೊ ರೈಲು ನಿಲ್ದಾಣಕ್ಕೆ ಬಂದು ಹೋಗುವವರಿಗೆ ತುಂಬಾ ತೊಂದರೆಯಾಗುತ್ತಿದೆ.