<p><strong>ಬೆಂಗಳೂರು:</strong> ಹಲವೆಡೆ ಒಳಚರಂಡಿ ಕಾಮಗಾರಿ ಮುಗಿದಿದ್ದರೆ, ಕೆಲವೆಡೆ ಆರಂಭವೇ ಆಗಿಲ್ಲ. ಕಾಮಗಾರಿ ನಿರ್ವಹಿಸಲು ಅಗೆದ ರಸ್ತೆಗಳಲ್ಲಿ ಸಂಚಾರಕ್ಕೆ ವಾಹನ ಸವಾರರ ಹರಸಾಹಸ ಪಡಬೇಕು. ಇದು ಯಲಹಂಕ ವಿಧಾನಸಭಾ ಕ್ಷೇತ್ರದ ಏಳು ಹಳ್ಳಿಗಳ ಸ್ಥಿತಿ ಇದು.</p>.<p>2007ರಲ್ಲಿ ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಈ ಕ್ಷೇತ್ರದ ಏಳು ಗ್ರಾಮಗಳು ಒಳಗೊಂಡಿವೆ. ಈ ಪೈಕಿ ಐದು ಹಳ್ಳಿಗಳಲ್ಲಿ ಒಳಚರಂಡಿ ಮತ್ತು ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ಕೆಲವೆಡೆ ಮುಕ್ತಾಯಗೊಂಡಿದ್ದರೆ, ಇನ್ನೂ ಹಲವೆಡೆ ಅಂತಿಮ ಹಂತದ ಕಾಮಗಾರಿ ನಡೆಯುತ್ತಿದೆ.</p>.<p>ಉಳಿದಂತೆ ನಾಗೇನಹಳ್ಳಿ ಮತ್ತು ಹಾರೋಹಳ್ಳಿಯಲ್ಲಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಪೈಪ್ಲೈನ್ ಅಳವಡಿಕೆ ಕಾರ್ಯ ಮುಗಿದಿದೆ. ಆದರೆ, ಒಳಚರಂಡಿ ಕಾಮಗಾರಿ ಆರಂಭವೇ ಆಗಿಲ್ಲ. ಈ ಕಾಮಗಾರಿ ನಿರ್ವಹಿಸಲು ನೇಮಿಸಲಾಗಿದ್ದ ಏಜೆನ್ಸಿ ಕಾರ್ಯ ನಿರ್ವಹಸದೆ ಬಿಟ್ಟು ಹೋದ ಕಾರಣ ಬೇರೆ ಏಜೆನ್ಸಿ ನಿಗದಿ ಮಾಡಲಾಗಿದೆ. ಕಾಮಗಾರಿ ಇನ್ನಷ್ಟೇ ಆಗಬೇಕಿದೆ ಎಂದು ಸ್ಥಳೀಯರು ಹೇಳುತ್ತಾರೆ.</p>.<p>ಅನಂತಪುರ, ಕೆಂಚೇನಹಳ್ಳಿ, ದೊಡ್ಡಬೆಟ್ಟಹಳ್ಳಿ, ಚಿಕ್ಕಬೆಟ್ಟಹಳ್ಳಿಯಲ್ಲಿ ಒಳಚರಂಡಿ ಕಾಮಗಾರಿ ನಿರ್ವಹಿಸಲಾಗಿದೆ. ಇದ್ದ ರಸ್ತೆಗಳನ್ನು ಬಗೆದು ಒಳಚರಂಡಿ ಮತ್ತು ಕಾವೇರಿ ನೀರಿನ ಪೂರೈಕೆ ಕೊಳವೆ ಮಾರ್ಗಗಳನ್ನು ಅಳವಡಿಸಲಾಗಿದೆ. ಎಲ್ಲಾ ರಸ್ತೆಗಳಲ್ಲೂ ಒಳಚರಂಡಿಯ ಹೊಸ ಮ್ಯಾನ್ಹೋಲ್ಗಳು ತಲೆ ಎತ್ತಿ ನಿಂತಿವೆ.</p>.<p>‘ಕೆಮ್ಮಣ್ಣಿನ ಗೂಡಿನಂತಾಗಿರುವ ರಸ್ತೆಗಳು ಮಳೆ ಬಂದರೆ ಕೆಸರು ಗದ್ದೆಗಳಂತೆ ಆಗುತ್ತವೆ. ಇವುಗಳ ನಡುವೆಯೇ ವಾಹನ ಚಾಲನೆ ಮಾಡಬೇಕಾದ ಅನಿವಾರ್ಯ ಇದೆ. ಕೆಲ ವರ್ಷಗಳಿಂದ ಇದೇ ಸಮಸ್ಯೆಯಲ್ಲಿ ಮುಳುಗಿ ರೋಸಿ ಹೋಗಿದ್ದೇವೆ’ ಎನ್ನುತ್ತಾರೆ ಸ್ಥಳೀಯರು.</p>.<p>ಯಲಹಂಕ ನ್ಯೂಟೌನ್ನಿಂದ ಎಂ.ಎಸ್. ಪಾಳ್ಯ ವೃತ್ತದ ಮೂಲಕ ಗಂಗಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಸಂದೀಪ್ ಉನ್ನಿ ಕೃಷ್ಣನ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಒಳಚರಂಡಿ ಕೊಳವೆಮಾರ್ಗ ಹಾದು ಹೋಗಿರುವ ಕಡೆ ಜಲ್ಲಿ ತುಂಬಿ ರಸ್ತೆಯನ್ನು ಗಟ್ಟಿಗೊಳಿಸಲಾಗುತ್ತಿದೆ. ಈ ಭಾಗದ ಪ್ರಮುಖ ರಸ್ತೆ ಇದಾಗಿರುವ ಕಾರಣ ವಾಹನಗಳ ಸಂಚಾರ ಹೆಚ್ಚಾಗಿಯೇ ಇರುತ್ತದೆ. ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ವಾಹನಗಳ ಸಂಚಾರಕ್ಕೆ ಬಿಟ್ಟುಕೊಡಬೇಕು ಎಂಬುದು ಸ್ಥಳೀಯರ ಒತ್ತಾಯ.</p>.<p><strong>‘ರಸ್ತೆ ಮರುನಿರ್ಮಾಣ ಕಾಮಗಾರಿ ಆರಂಭವಾಗಿದೆ’</strong><br />‘ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿ ಮುಗಿಸಿ ಜಲಮಂಡಳಿ ಒಪ್ಪಿಗೆ ನೀಡಿದ ರಸ್ತೆಗಳನ್ನು ಮರು ನಿರ್ಮಾಣ ಮಾಡಿ ಡಾಂಬರ್ ಹಾಕುವ ಕೆಲಸ ಆರಂಭಿಸಲಾಗಿದೆ’ ಎಂದು ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>‘ಮನೆ–ಮನೆಗೆ ಒಳಚರಂಡಿ ಮತ್ತು ನೀರಿನ ಸಂಪರ್ಕ ಕಲ್ಪಿಸಿದ ಬಳಿಕ ರಸ್ತೆ ನಿರ್ಮಾಣಕ್ಕೆ ಜಲಮಂಡಳಿ ಅನುಮತಿ ನೀಡುತ್ತಿದೆ. ರಸ್ತೆ ಬದಿಯ ಚರಂಡಿ, ಕಲ್ವರ್ಟ್ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದು ಹೇಳಿದರು.</p>.<p>‘ನಮ್ಮ ಕ್ಷೇತ್ರದ ಏಳು ಹಳ್ಳಿಗಳಲ್ಲಿ ವ್ಯಾಪ್ತಿಯಲ್ಲಿ ಐದು ಹಳ್ಳಿಗಳಲ್ಲಿ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಎರಡು ಹಳ್ಳಿಗಳಲ್ಲಿ ಒಳಚರಂಡಿ ಕಾಮಗಾರಿ ಆರಂಭವಾಗಬೇಕಿದೆ. ಕಾಮಗಾರಿ ಮುಗಿದಿರುವ ಕಡೆ ರಸ್ತೆ ಮರು ನಿರ್ಮಾಣವನ್ನು ಹಂತ–ಹಂತವಾಗಿ ಆರಂಭಿಸಲಾಗಿದೆ’ ಎಂದು ವಿವರಿಸಿದರು.</p>.<p>ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯ ಅನುದಾನದ ಜೊತೆಗೆ ರಸ್ತೆ ಅಭಿವೃದ್ಧಿಗಾಗಿ ಬಿಬಿಎಂಪಿ ಕೋರಿದ್ದ ₹160 ಕೋಟಿ ಅನುದಾನವನ್ನು ಸರ್ಕಾರ ನೀಡಿದೆ. ಎರಡು ಹಳ್ಳಿ ಹೊರತುಪಡಿಸಿ ಉಳಿದ ಕಡೆ ರಸ್ತೆ ಅಭಿವೃದ್ಧಿಗೆ ಈ ಅನುದಾನ ಸಾಕಾಗಲಿದೆ ಎಂದು ಹೇಳಿದರು.</p>.<p>‘ಆಡಳಿತ ಪಕ್ಷದ ಶಾಸಕರಿರುವ ಕ್ಷೇತ್ರಗಳಿಗೆ ಸ್ವಲ್ಪ ಹೆಚ್ಚಿನ ಅನುದಾನ ನೀಡುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ಕ್ಷೇತ್ರಕ್ಕೆ ₹500 ಕೋಟಿ ನೀಡಿ, ನಮ್ಮ ಕ್ಷೇತ್ರಗಳಿಗೆ ₹20 ಕೋಟಿಯನ್ನಷ್ಟೇ ನೀಡಲಾಗಿತ್ತು. ಕೆಲವು ಕ್ಷೇತ್ರಗಳಿಗೆ ಈಗ ಕಡಿಮೆ ಅನುದಾನ ನೀಡಿದ್ದರೂ, ಮುಂದಿನ ದಿನಗಳಲ್ಲಿ ಸರಿಪಡಿಸಬೇಕು ಎಂಬ ಆಲೋಚನೆಯನ್ನು ಮುಖ್ಯಮಂತ್ರಿ ಹೊಂದಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>*<br />ಒಳಚರಂಡಿ ಕಾಮಗಾರಿಗಾಗಿ ರಸ್ತೆಗಳನ್ನು ಅಗೆದು ಹಾಳು ಮಾಡಲಾಗಿದೆ. ತುಂಬಾ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದೇವೆ. ಆದಷ್ಟು ಬೇಗ ಡಾಂಬರು ಹಾಕಿ ಸಂಚಾರಕ್ಕೆ ಯೋಗ್ಯ ಮಾಡಬೇಕು.<br /><em><strong>-ನರಸಿಂಹಮೂರ್ತಿ, ಅನಂತಪುರ ನಿವಾಸಿ</strong></em></p>.<p class="Briefhead"><em><strong>**</strong></em><br /><strong>ಕಾಮಗಾರಿ ನಡೆಯುತ್ತಿರುವ ಹಳ್ಳಿಗಳು</strong></p>.<p>ಹಾರೋಹಳ್ಳಿ<br />ನಾಗೇನಹಳ್ಳಿ<br />ಕೆಂಚೇನಹಳ್ಳಿ<br />ಅನಂತಪುರ<br />ಅಟ್ಟೂರು<br />ದೊಡ್ಡಬೆಟ್ಟಹಳ್ಳಿ<br />ಚಿಕ್ಕಬೆಟ್ಟಹಳ್ಳಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಲವೆಡೆ ಒಳಚರಂಡಿ ಕಾಮಗಾರಿ ಮುಗಿದಿದ್ದರೆ, ಕೆಲವೆಡೆ ಆರಂಭವೇ ಆಗಿಲ್ಲ. ಕಾಮಗಾರಿ ನಿರ್ವಹಿಸಲು ಅಗೆದ ರಸ್ತೆಗಳಲ್ಲಿ ಸಂಚಾರಕ್ಕೆ ವಾಹನ ಸವಾರರ ಹರಸಾಹಸ ಪಡಬೇಕು. ಇದು ಯಲಹಂಕ ವಿಧಾನಸಭಾ ಕ್ಷೇತ್ರದ ಏಳು ಹಳ್ಳಿಗಳ ಸ್ಥಿತಿ ಇದು.</p>.<p>2007ರಲ್ಲಿ ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಈ ಕ್ಷೇತ್ರದ ಏಳು ಗ್ರಾಮಗಳು ಒಳಗೊಂಡಿವೆ. ಈ ಪೈಕಿ ಐದು ಹಳ್ಳಿಗಳಲ್ಲಿ ಒಳಚರಂಡಿ ಮತ್ತು ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ಕೆಲವೆಡೆ ಮುಕ್ತಾಯಗೊಂಡಿದ್ದರೆ, ಇನ್ನೂ ಹಲವೆಡೆ ಅಂತಿಮ ಹಂತದ ಕಾಮಗಾರಿ ನಡೆಯುತ್ತಿದೆ.</p>.<p>ಉಳಿದಂತೆ ನಾಗೇನಹಳ್ಳಿ ಮತ್ತು ಹಾರೋಹಳ್ಳಿಯಲ್ಲಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಪೈಪ್ಲೈನ್ ಅಳವಡಿಕೆ ಕಾರ್ಯ ಮುಗಿದಿದೆ. ಆದರೆ, ಒಳಚರಂಡಿ ಕಾಮಗಾರಿ ಆರಂಭವೇ ಆಗಿಲ್ಲ. ಈ ಕಾಮಗಾರಿ ನಿರ್ವಹಿಸಲು ನೇಮಿಸಲಾಗಿದ್ದ ಏಜೆನ್ಸಿ ಕಾರ್ಯ ನಿರ್ವಹಸದೆ ಬಿಟ್ಟು ಹೋದ ಕಾರಣ ಬೇರೆ ಏಜೆನ್ಸಿ ನಿಗದಿ ಮಾಡಲಾಗಿದೆ. ಕಾಮಗಾರಿ ಇನ್ನಷ್ಟೇ ಆಗಬೇಕಿದೆ ಎಂದು ಸ್ಥಳೀಯರು ಹೇಳುತ್ತಾರೆ.</p>.<p>ಅನಂತಪುರ, ಕೆಂಚೇನಹಳ್ಳಿ, ದೊಡ್ಡಬೆಟ್ಟಹಳ್ಳಿ, ಚಿಕ್ಕಬೆಟ್ಟಹಳ್ಳಿಯಲ್ಲಿ ಒಳಚರಂಡಿ ಕಾಮಗಾರಿ ನಿರ್ವಹಿಸಲಾಗಿದೆ. ಇದ್ದ ರಸ್ತೆಗಳನ್ನು ಬಗೆದು ಒಳಚರಂಡಿ ಮತ್ತು ಕಾವೇರಿ ನೀರಿನ ಪೂರೈಕೆ ಕೊಳವೆ ಮಾರ್ಗಗಳನ್ನು ಅಳವಡಿಸಲಾಗಿದೆ. ಎಲ್ಲಾ ರಸ್ತೆಗಳಲ್ಲೂ ಒಳಚರಂಡಿಯ ಹೊಸ ಮ್ಯಾನ್ಹೋಲ್ಗಳು ತಲೆ ಎತ್ತಿ ನಿಂತಿವೆ.</p>.<p>‘ಕೆಮ್ಮಣ್ಣಿನ ಗೂಡಿನಂತಾಗಿರುವ ರಸ್ತೆಗಳು ಮಳೆ ಬಂದರೆ ಕೆಸರು ಗದ್ದೆಗಳಂತೆ ಆಗುತ್ತವೆ. ಇವುಗಳ ನಡುವೆಯೇ ವಾಹನ ಚಾಲನೆ ಮಾಡಬೇಕಾದ ಅನಿವಾರ್ಯ ಇದೆ. ಕೆಲ ವರ್ಷಗಳಿಂದ ಇದೇ ಸಮಸ್ಯೆಯಲ್ಲಿ ಮುಳುಗಿ ರೋಸಿ ಹೋಗಿದ್ದೇವೆ’ ಎನ್ನುತ್ತಾರೆ ಸ್ಥಳೀಯರು.</p>.<p>ಯಲಹಂಕ ನ್ಯೂಟೌನ್ನಿಂದ ಎಂ.ಎಸ್. ಪಾಳ್ಯ ವೃತ್ತದ ಮೂಲಕ ಗಂಗಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಸಂದೀಪ್ ಉನ್ನಿ ಕೃಷ್ಣನ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಒಳಚರಂಡಿ ಕೊಳವೆಮಾರ್ಗ ಹಾದು ಹೋಗಿರುವ ಕಡೆ ಜಲ್ಲಿ ತುಂಬಿ ರಸ್ತೆಯನ್ನು ಗಟ್ಟಿಗೊಳಿಸಲಾಗುತ್ತಿದೆ. ಈ ಭಾಗದ ಪ್ರಮುಖ ರಸ್ತೆ ಇದಾಗಿರುವ ಕಾರಣ ವಾಹನಗಳ ಸಂಚಾರ ಹೆಚ್ಚಾಗಿಯೇ ಇರುತ್ತದೆ. ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ವಾಹನಗಳ ಸಂಚಾರಕ್ಕೆ ಬಿಟ್ಟುಕೊಡಬೇಕು ಎಂಬುದು ಸ್ಥಳೀಯರ ಒತ್ತಾಯ.</p>.<p><strong>‘ರಸ್ತೆ ಮರುನಿರ್ಮಾಣ ಕಾಮಗಾರಿ ಆರಂಭವಾಗಿದೆ’</strong><br />‘ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿ ಮುಗಿಸಿ ಜಲಮಂಡಳಿ ಒಪ್ಪಿಗೆ ನೀಡಿದ ರಸ್ತೆಗಳನ್ನು ಮರು ನಿರ್ಮಾಣ ಮಾಡಿ ಡಾಂಬರ್ ಹಾಕುವ ಕೆಲಸ ಆರಂಭಿಸಲಾಗಿದೆ’ ಎಂದು ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>‘ಮನೆ–ಮನೆಗೆ ಒಳಚರಂಡಿ ಮತ್ತು ನೀರಿನ ಸಂಪರ್ಕ ಕಲ್ಪಿಸಿದ ಬಳಿಕ ರಸ್ತೆ ನಿರ್ಮಾಣಕ್ಕೆ ಜಲಮಂಡಳಿ ಅನುಮತಿ ನೀಡುತ್ತಿದೆ. ರಸ್ತೆ ಬದಿಯ ಚರಂಡಿ, ಕಲ್ವರ್ಟ್ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದು ಹೇಳಿದರು.</p>.<p>‘ನಮ್ಮ ಕ್ಷೇತ್ರದ ಏಳು ಹಳ್ಳಿಗಳಲ್ಲಿ ವ್ಯಾಪ್ತಿಯಲ್ಲಿ ಐದು ಹಳ್ಳಿಗಳಲ್ಲಿ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಎರಡು ಹಳ್ಳಿಗಳಲ್ಲಿ ಒಳಚರಂಡಿ ಕಾಮಗಾರಿ ಆರಂಭವಾಗಬೇಕಿದೆ. ಕಾಮಗಾರಿ ಮುಗಿದಿರುವ ಕಡೆ ರಸ್ತೆ ಮರು ನಿರ್ಮಾಣವನ್ನು ಹಂತ–ಹಂತವಾಗಿ ಆರಂಭಿಸಲಾಗಿದೆ’ ಎಂದು ವಿವರಿಸಿದರು.</p>.<p>ಮುಖ್ಯಮಂತ್ರಿ ನಗರೋತ್ಥಾನ ಯೋಜನೆಯ ಅನುದಾನದ ಜೊತೆಗೆ ರಸ್ತೆ ಅಭಿವೃದ್ಧಿಗಾಗಿ ಬಿಬಿಎಂಪಿ ಕೋರಿದ್ದ ₹160 ಕೋಟಿ ಅನುದಾನವನ್ನು ಸರ್ಕಾರ ನೀಡಿದೆ. ಎರಡು ಹಳ್ಳಿ ಹೊರತುಪಡಿಸಿ ಉಳಿದ ಕಡೆ ರಸ್ತೆ ಅಭಿವೃದ್ಧಿಗೆ ಈ ಅನುದಾನ ಸಾಕಾಗಲಿದೆ ಎಂದು ಹೇಳಿದರು.</p>.<p>‘ಆಡಳಿತ ಪಕ್ಷದ ಶಾಸಕರಿರುವ ಕ್ಷೇತ್ರಗಳಿಗೆ ಸ್ವಲ್ಪ ಹೆಚ್ಚಿನ ಅನುದಾನ ನೀಡುವುದು ಹಿಂದಿನಿಂದ ನಡೆದುಕೊಂಡು ಬಂದಿದೆ. ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ಕ್ಷೇತ್ರಕ್ಕೆ ₹500 ಕೋಟಿ ನೀಡಿ, ನಮ್ಮ ಕ್ಷೇತ್ರಗಳಿಗೆ ₹20 ಕೋಟಿಯನ್ನಷ್ಟೇ ನೀಡಲಾಗಿತ್ತು. ಕೆಲವು ಕ್ಷೇತ್ರಗಳಿಗೆ ಈಗ ಕಡಿಮೆ ಅನುದಾನ ನೀಡಿದ್ದರೂ, ಮುಂದಿನ ದಿನಗಳಲ್ಲಿ ಸರಿಪಡಿಸಬೇಕು ಎಂಬ ಆಲೋಚನೆಯನ್ನು ಮುಖ್ಯಮಂತ್ರಿ ಹೊಂದಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>*<br />ಒಳಚರಂಡಿ ಕಾಮಗಾರಿಗಾಗಿ ರಸ್ತೆಗಳನ್ನು ಅಗೆದು ಹಾಳು ಮಾಡಲಾಗಿದೆ. ತುಂಬಾ ದಿನಗಳಿಂದ ತೊಂದರೆ ಅನುಭವಿಸುತ್ತಿದ್ದೇವೆ. ಆದಷ್ಟು ಬೇಗ ಡಾಂಬರು ಹಾಕಿ ಸಂಚಾರಕ್ಕೆ ಯೋಗ್ಯ ಮಾಡಬೇಕು.<br /><em><strong>-ನರಸಿಂಹಮೂರ್ತಿ, ಅನಂತಪುರ ನಿವಾಸಿ</strong></em></p>.<p class="Briefhead"><em><strong>**</strong></em><br /><strong>ಕಾಮಗಾರಿ ನಡೆಯುತ್ತಿರುವ ಹಳ್ಳಿಗಳು</strong></p>.<p>ಹಾರೋಹಳ್ಳಿ<br />ನಾಗೇನಹಳ್ಳಿ<br />ಕೆಂಚೇನಹಳ್ಳಿ<br />ಅನಂತಪುರ<br />ಅಟ್ಟೂರು<br />ದೊಡ್ಡಬೆಟ್ಟಹಳ್ಳಿ<br />ಚಿಕ್ಕಬೆಟ್ಟಹಳ್ಳಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>