ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಬಾಬು, ‘ಬ್ರ್ಯಾಂಡ್ ಬೆಂಗಳೂರಿನಲ್ಲಿ ಬಡವರಿಗೆ ವ್ಯಾಪಾರ ಮಾಡಲು ಜಾಗವಿಲ್ಲವೇ? ಕಳೆದ ಆರು ತಿಂಗಳಲ್ಲಿ ಮಹದೇವಪುರ ವ್ಯಾಪ್ತಿಯೊಂದರಲ್ಲಿ 1 ಸಾವಿರಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಮಲ್ಲೇಶ್ವರ, ಜಯನಗರ 4ನೇ ಬಡಾವಣೆ ಹಾಗೂ ಬನಶಂಕರಿಯಲ್ಲಿ ಬೀದಿ ವ್ಯಾಪಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ತೆರವುಗೊಳಿಸಿದ್ದಾರೆ. ಇದರಿಂದ, ಹಲವಾರು ವ್ಯಾಪಾರಿಗಳು ನಷ್ಟ ಅನುಭವಿಸಿ ಬೀದಿ ಪಾಲಾಗಿದ್ದು, ಇಂತಹ ವ್ಯಾಪಾರಿಗಳಿಗಾಗಿರುವ ನಷ್ಟವನ್ನು ಭರಿಸಬೇಕು’ ಎಂದು ಒತ್ತಾಯಿಸಿದರು.