<p><strong>ಯಲಹಂಕ</strong>: ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.</p>.<p>ಕೊಡಿಗೇಹಳ್ಳಿಯ ಬಾಲಾಜಿ ಬಡಾವಣೆ, ವಿದ್ಯಾರಣ್ಯಪುರದ ವೆಂಕಟಸ್ವಾಮಪ್ಪ ಬಡಾವಣೆ, ಗುರುದರ್ಶನ ಬಡಾವಣೆ, ಬಸವಸಮಿತಿ ಬಡಾವಣೆ, ಸಹಕಾರನಗರ, ಕೆನರಾಬ್ಯಾಂಕ್ ಬಡಾವಣೆ, ಎಂಸಿಇಸಿಎಚ್ಎಸ್ ಬಡಾವಣೆ ಹಾಗೂ ಕೆಂಪಾಪುರದ ಚೌಳರಪ್ಪ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಕ್ಷೇತ್ರವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಈ ಹಿಂದೆ ಅಭಿವೃದ್ಧಿಪಡಿಸಿದ್ದ ರಸ್ತೆಗಳು ಕಾವೇರಿ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸಲು ಕೈಗೊಂಡಿದ್ದ ಕಾಮಗಾರಿ ಹಾಗೂ ಭಾರೀ ಮಳೆಯಿಂದ ಹಾಳಾಗಿ ವಾಹನಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಈ ದಿಸೆಯಲ್ಲಿ ಸ್ಥಳೀಯ ನಿವಾಸಿಗಳ ಮನವಿಯ ಮೇರೆಗೆ ರಸ್ತೆಗಳ ಅಭಿವೃದ್ಧಿ ಮತ್ತು ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಪಾಲಿಕೆ ಮಾಜಿ ಸದಸ್ಯರಾದ ಪಿ.ವಿ.ಮಂಜುನಾಥಬಾಬು, ಲಕ್ಷ್ಮೀಹರಿ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ವಿ.ಹರಿ, ಕೆ.ಆರ್.ರಾಜು, ವೆಂಕಟಸ್ವಾಮಿ, ಎಚ್.ಎ.ಶಿವಕುಮಾರ್, ವಿಶ್ವ, ಕೆ.ದಿಲೀಪ್ಕುಮಾರ್, ಹನುಮಂತಿ, ತಿಂಡ್ಲು ಸತೀಶ್, ಕೆ.ಮಂಜುನಾಥ್, ಶಾಂತಮ್ಮ, ಟಿ.ರಮೇಶ್, ಕಾರ್ಣಿಕ್ ರಾಜ್, ರಾಮಚಂದ್ರಪುರ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.</p>.<p>ಕೊಡಿಗೇಹಳ್ಳಿಯ ಬಾಲಾಜಿ ಬಡಾವಣೆ, ವಿದ್ಯಾರಣ್ಯಪುರದ ವೆಂಕಟಸ್ವಾಮಪ್ಪ ಬಡಾವಣೆ, ಗುರುದರ್ಶನ ಬಡಾವಣೆ, ಬಸವಸಮಿತಿ ಬಡಾವಣೆ, ಸಹಕಾರನಗರ, ಕೆನರಾಬ್ಯಾಂಕ್ ಬಡಾವಣೆ, ಎಂಸಿಇಸಿಎಚ್ಎಸ್ ಬಡಾವಣೆ ಹಾಗೂ ಕೆಂಪಾಪುರದ ಚೌಳರಪ್ಪ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ಕ್ಷೇತ್ರವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಈ ಹಿಂದೆ ಅಭಿವೃದ್ಧಿಪಡಿಸಿದ್ದ ರಸ್ತೆಗಳು ಕಾವೇರಿ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸಲು ಕೈಗೊಂಡಿದ್ದ ಕಾಮಗಾರಿ ಹಾಗೂ ಭಾರೀ ಮಳೆಯಿಂದ ಹಾಳಾಗಿ ವಾಹನಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಈ ದಿಸೆಯಲ್ಲಿ ಸ್ಥಳೀಯ ನಿವಾಸಿಗಳ ಮನವಿಯ ಮೇರೆಗೆ ರಸ್ತೆಗಳ ಅಭಿವೃದ್ಧಿ ಮತ್ತು ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಪಾಲಿಕೆ ಮಾಜಿ ಸದಸ್ಯರಾದ ಪಿ.ವಿ.ಮಂಜುನಾಥಬಾಬು, ಲಕ್ಷ್ಮೀಹರಿ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ವಿ.ಹರಿ, ಕೆ.ಆರ್.ರಾಜು, ವೆಂಕಟಸ್ವಾಮಿ, ಎಚ್.ಎ.ಶಿವಕುಮಾರ್, ವಿಶ್ವ, ಕೆ.ದಿಲೀಪ್ಕುಮಾರ್, ಹನುಮಂತಿ, ತಿಂಡ್ಲು ಸತೀಶ್, ಕೆ.ಮಂಜುನಾಥ್, ಶಾಂತಮ್ಮ, ಟಿ.ರಮೇಶ್, ಕಾರ್ಣಿಕ್ ರಾಜ್, ರಾಮಚಂದ್ರಪುರ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>