ದೂರುದಾರರಾದ ನೇತ್ರಾವತಿ ಪುತ್ರ ಸಂಜಯ್ ಮತ್ತು ಪುತ್ರಿ ಸೇರಿ ಕೆಲವು ಸ್ಥಳೀಯರು ಭಾನುವಾರ ಸಂಜೆ ರಸ್ತೆ ಬದಿ ನೆಟ್ ಕಟ್ಟಕೊಂಡು ವಾಲಿಬಾಲ್ ಆಡುತ್ತಿದ್ದರು. ಇದರಿಂದ ಸ್ಥಳೀಯರ ಓಡಾಟಕ್ಕೆ ತೊಂದರೆಯಾಗುತ್ತಿತ್ತು. ಹೀಗಾಗಿ, ಸ್ಥಳೀಯರಾದ ಬಾಲಾಜಿ, ಯೋಗಿ ಹಾಗೂ ಭಾಸ್ಕರ್ ಅದನ್ನು ಪ್ರಶ್ನಿಸಿದ್ದರು. ಅಷ್ಟರಲ್ಲಿ ಸಂಜಯ್ ಅವರ ತಾಯಿ ಸ್ಥಳಕ್ಕೆ ಬಂದರು. ಆಗ ಪರಸ್ಪರ ವಾಗ್ವಾದ ನಡೆಯಿತು. ಗಲಾಟೆ ವಿಕೋಪಕ್ಕೆ ತಿರುಗಿ ಎರಡೂ ಗುಂಪುಗಳಲ್ಲಿ ಇದ್ದವರು ಹೊಡೆದಾಡಿಕೊಂಡಿದ್ದಾರೆ. ಗಲಾಟೆ ವೇಳೆ ಕೆಲವರು ನೇತ್ರಾವತಿ ಮತ್ತು ಆಕೆಯ ಪುತ್ರಿಯ ತಲೆ ಕೂದಲು ಹಿಡಿದು ರಸ್ತೆಯಲ್ಲಿ ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.