‘ಹಲ್ಲೆಯಿಂದಾಗಿ ರಂಗನಾಥ್ ಅವರ ಹೊಟ್ಟೆ, ಕೈ, ಕಾಲಿಗೆ ಗಾಯಗಳಾಗಿವೆ. ರಸ್ತೆಯಲ್ಲಿ ನರಳುತ್ತ ಬಿದ್ದಿದ್ದ ರಂಗನಾಥ್ ಅವರನ್ನು ಗಸ್ತಿನಲ್ಲಿದ್ದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೃತ್ಯ ನಡೆದ ಸ್ಥಳದಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.