ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವಂತ ಗುಂಡು ಸಮೇತ ಪಿಸ್ತೂಲ್ ಜಪ್ತಿ

Last Updated 20 ಡಿಸೆಂಬರ್ 2019, 19:44 IST
ಅಕ್ಷರ ಗಾತ್ರ

ಬೆಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಏಳು ಜೀವಂತ ಗುಂಡುಗಳ ಸಮೇತ ನಾಡಪಿಸ್ತೂಲ್ ಹಾಗೂ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ದೇವಸಂದ್ರದ ಶಮ್ಮು (35) ಹಾಗೂ ಚಿತ್ರದುರ್ಗದ ಆಸಿಫ್ ಬಂಧಿತರು.

‘ಡಿ. 18ರಂದು ವಿದ್ಯಾರಣ್ಯಪುರ ಬಳಿ ಆರೋಪಿಗಳು ಓಡಾಡುತ್ತಿದ್ದರು. ಆ ಬಗ್ಗೆ ಮಾಹಿತಿ ಪಡೆದು ದಾಳಿ ಮಾಡಲಾಯಿತು. ಕಾರಿನಲ್ಲಿ ಪಿಸ್ತೂಲ್‌, 1 ಕೆ.ಜಿ ಬೆಳ್ಳಿ ಆಭರಣ ಹಾಗೂ 200 ಗ್ರಾಂ ಚಿನ್ನಾಭರಣ ಸಿಕ್ಕವು’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಆರೋಪಿಗಳು ಹಲವೆಡೆ ದರೋಡೆ ಮಾಡಿರುವ ಮಾಹಿತಿ ಇದೆ. ವಿದ್ಯಾರಣ್ಯಪುರದಲ್ಲೂ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆ ಮಾಡಲು ಸಂಚು ರೂಪಿಸಿದ್ದು ತನಿಖೆಯಿಂದ ಗೊತ್ತಾಗಿದೆ. ಅವರಿಬ್ಬರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT