‘ತನ್ನ ತಂದೆ ಮಾಡಿರುವ ಸಾಲವನ್ನು ತೀರಿಸಲು ಹಣ ಬೇಕೆಂದು ಕಿಶೋರ್, ಲೀಲಾವತಿಗೆ ಹೇಳಿದ್ದ. ಬಳಿಕ ಇಬ್ಬರೂ ಸೇರಿ ವೆಂಕಟಲಕ್ಷ್ಮಮ್ಮ ಅವರನ್ನು ಸುಲಿಗೆ ಮಾಡಲು ಸಂಚು ರೂಪಿಸಿದ್ದರು. ಜುಲೈ 23ರಂದು ಸಂಜೆ 5.30ರ ಸುಮಾರಿಗೆ ಮನೆಗೆ ನುಗ್ಗಿದ್ದ ಆರೋಪಿಗಳು, ಬಾಯಿಗೆ ಬಟ್ಟೆ ತುರುಕಿ ಕೈಕಾಲು ಕಟ್ಟಿ ಹಾಕಿದ್ದರು. ₹50 ಸಾವಿರ ನಗದು ಹಾಗೂ ಬೆಳ್ಳಿ ಸರ ಸುಲಿಗೆ ಮಾಡಿ ಪರಾರಿಯಾಗಿದ್ದರು’ ಎಂದು ಪೊಲೀಸರು ಹೇಳಿದರು.