ಬೆಂಗಳೂರು: ವಿವೇಕನಗರ 1ನೇ ಮುಖ್ಯರಸ್ತೆಯ ಅಂಚೆ ಕಚೇರಿ ಬಳಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಸಂಚು ರೂಪಿಸಿದ್ದ ಆರೋಪದಡಿ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ಡಿ. 5ರಂದು ಆರೋಪಿಗಳನ್ನು ನೋಡಿದ್ದ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿ ಎರಡು ಕತ್ತಿಗಳು, ಮಚ್ಚು, ಚಾಕು ಹಾಗೂ ಇತರೆ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.