<p><strong>ಬೆಂಗಳೂರು:</strong> ಪ್ರಯಾಣಿಕರ ಸೋಗಿನಲ್ಲಿ ಕ್ಯಾಬ್ ಚಾಲಕರನ್ನು ಸುಲಿಗೆ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಆರ್.ಎಂ.ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಭಿಷೇಕ್, ರೋಹಿತ್, ಅಜಯ್ ಹಾಗೂ ಮಣಿಕಂಠ ಬಂಧಿತರು. ಬಾಲ್ಯ ಸ್ನೇಹಿತರಾಗಿದ್ದ ಆರೋಪಿಗಳು, ದುಶ್ಚಟಗಳ ದಾಸರಾಗಿದ್ದರು. ಅಕ್ರಮವಾಗಿ ಹಣ ಸಂಪಾದಿಸಲು ಸುಲಿಗೆ ಮಾಡಲಾರಂಭಿಸಿದ್ದರು. ಅವರಿಂದ ₹18,000 ನಗದು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನ. 4ರಂದು ಚಾಲಕ ಪ್ರವೀಣ್ ಎಂಬುವರ ಕ್ಯಾಬ್ ಕಾಯ್ದಿರಿಸಿದ್ದ ಆರೋಪಿಗಳು, ಸಿಂಗಾಪುರ ಲೇಔಟ್ಗೆ ಹೋಗಬೇಕೆಂದು ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಚಾಲಕನಿಗೆ ಡ್ರ್ಯಾಗರ್ ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಚಾಲಕನ ಬಳಿ ಇದ್ದ ₹ 2,500 ನಗದು ಹಾಗೂ ಮೊಬೈಲ್ ಸುಲಿಗೆ ಮಾಡಿದ್ದರು. ಎಟಿಎಂ ಕಾರ್ಡ್ನಿಂದ ಹಣವನ್ನೂ ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದರು.’</p>.<p>‘ಚಾಲಕ ನೀಡಿದ್ದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾಡುಗೋಡಿ, ಅನ್ನಪೂರ್ಣೇಶ್ವರಿ ನಗರ ಹಾಗೂ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ' ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಯಾಣಿಕರ ಸೋಗಿನಲ್ಲಿ ಕ್ಯಾಬ್ ಚಾಲಕರನ್ನು ಸುಲಿಗೆ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಆರ್.ಎಂ.ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಭಿಷೇಕ್, ರೋಹಿತ್, ಅಜಯ್ ಹಾಗೂ ಮಣಿಕಂಠ ಬಂಧಿತರು. ಬಾಲ್ಯ ಸ್ನೇಹಿತರಾಗಿದ್ದ ಆರೋಪಿಗಳು, ದುಶ್ಚಟಗಳ ದಾಸರಾಗಿದ್ದರು. ಅಕ್ರಮವಾಗಿ ಹಣ ಸಂಪಾದಿಸಲು ಸುಲಿಗೆ ಮಾಡಲಾರಂಭಿಸಿದ್ದರು. ಅವರಿಂದ ₹18,000 ನಗದು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ನ. 4ರಂದು ಚಾಲಕ ಪ್ರವೀಣ್ ಎಂಬುವರ ಕ್ಯಾಬ್ ಕಾಯ್ದಿರಿಸಿದ್ದ ಆರೋಪಿಗಳು, ಸಿಂಗಾಪುರ ಲೇಔಟ್ಗೆ ಹೋಗಬೇಕೆಂದು ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಚಾಲಕನಿಗೆ ಡ್ರ್ಯಾಗರ್ ತೋರಿಸಿ ಕೊಲೆ ಬೆದರಿಕೆಯೊಡ್ಡಿದ್ದರು. ಚಾಲಕನ ಬಳಿ ಇದ್ದ ₹ 2,500 ನಗದು ಹಾಗೂ ಮೊಬೈಲ್ ಸುಲಿಗೆ ಮಾಡಿದ್ದರು. ಎಟಿಎಂ ಕಾರ್ಡ್ನಿಂದ ಹಣವನ್ನೂ ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದರು.’</p>.<p>‘ಚಾಲಕ ನೀಡಿದ್ದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾಡುಗೋಡಿ, ಅನ್ನಪೂರ್ಣೇಶ್ವರಿ ನಗರ ಹಾಗೂ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿ ಇದೆ' ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>