ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರುಗಳ ಗಾಜು ಒಡೆದು ಕಳ್ಳತನ: ಇಬ್ಬರ ಬಂಧನ

Last Updated 6 ಆಗಸ್ಟ್ 2022, 3:14 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಇತರೆಡೆ ನಿಲ್ಲಿಸುತ್ತಿದ್ದ ಕಾರುಗಳ ಗಾಜು ಒಡೆದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದಾರೆ.

‘ತಮಿಳುನಾಡಿನ ನಟರಾಜ್ ಹಾಗೂ ಗೋಕುಲ್ ಬಂಧಿತರು. ತಮಿಳುನಾಡಿನ ರಾಮ್‌ಜೀ ಗ್ಯಾಂಗ್‌ಸದಸ್ಯರಾದ ಇವರಿಬ್ಬರು, ಆಗಾಗನಗರಕ್ಕೆ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬಂಡೇಪಾಳ್ಯದಲ್ಲಿ ನಿಲ್ಲಿಸಿದ್ದ ಕಾರೊಂದರ ಗಾಜು ಒಡೆದಿದ್ದ ಆರೋಪಿಗಳು, ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ ₹ 1.10 ಲಕ್ಷ ನಗದು,8 ಲ್ಯಾಪ್‌ಟಾಪ್, ಮೊಬೈಲ್ ಹಾಗೂ ಕ್ಯಾಮೆರಾ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT