ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಹಾಗೂ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಶಿವಾಜಿನಗರದ ಸಯ್ಯದ್ ನಜೀಮ್ ಅಲಿಯಾಸ್ ದನಿ (23) ಹಾಗೂ ಸಯ್ಯದ್ ಅಲಿ (26) ಬಂಧಿ ತರು. ಇವರಿಂದ ₹ 5.95 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನ ಹಾಗೂ 5 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಬೆನ್ಸನ್ ಅಡ್ಡ ರಸ್ತೆಯಲ್ಲಿ ಮೇ 23ರಂದು ವ್ಯಕ್ತಿಯೊಬ್ಬ ರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.