ಖಾಸಗಿ ಕಂಪನಿಯಲ್ಲಿ ಕಾರು ಚಾಲಕನಾಗಿರುವ ಗಿರೀಶ್, ಸೋಮ ವಾರ ರಾತ್ರಿ 12.30ರ ಸುಮಾರಿಗೆ ನೆಲಗದರನಹಳ್ಳಿ ಸಮೀಪ ಹೋಗುತ್ತಿದ್ದರು. ರಸ್ತೆಯಲ್ಲಿ ಹಂಪ್ಸ್ ಇದ್ದ ಕಾರಣ ನಿಧಾನ ವಾಗಿ ಕಾರು ಚಲಾಯಿಸುತ್ತಿದ್ದರು. ಆಗ ಕಾರು ಮತ್ತು ಬೈಕ್ಗಳಲ್ಲಿ ಬಂದ ಆರಕ್ಕೂ ಹೆಚ್ಚು ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ, ಗನ್ ತೋರಿಸಿ ಕೊಲ್ಲುವು ದಾಗಿ ಬೆದರಿಸಿದ್ದಾರೆ. ಅಲ್ಲದೆ, ಗಿರೀಶ್ ಬಳಿ ಇದ್ದ ₹ 16 ಸಾವಿರ ಮತ್ತು ಮೊಬೈಲ್ ಕಿತ್ತುಕೊಂಡು ಕಾರು ಸಮೇತ ಪರಾರಿಯಾಗಿದ್ದಾರೆ.