‘ಖಾಸಗಿ ಕಂಪನಿ ಉದ್ಯೋಗಿಯಾದ ಗೌರವ್ ಹಾಗೂ ಅವರ ಸ್ನೇಹಿತ, ಜೂನ್ 27ರಂದು ರಾತ್ರಿ ಕೆಲಸ ಮುಗಿಸಿಕೊಂಡು ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್ ಬಳಿ ಹೊರಟಿದ್ದರು. ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಮೊಬೈಲ್ ಮತ್ತು ಪರ್ಸ್ ನೀಡುವಂತೆ ಚಾಕು ತೋರಿಸಿ ಬೆದರಿಸಿದ್ದರು. ಈ ಸಂಗತಿ ಗೌರವ್ ನೀಡಿರುವ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.