<p><strong>ಬೆಂಗಳೂರು:</strong> ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಕೈ ಬೆರಳಿಗೆ ಚಾಕುವಿನಿಂದ ಇರಿದು ಸುಲಿಗೆಗೆ ಯತ್ನಿಸಿ ಪರಾರಿಯಾಗಿದ್ದಾರೆ.</p>.<p>ಈ ಸಂಬಂಧ ಸವಾರ ಗೌರವ್ ಅಗರವಾಲ್ ಎಂಬುವರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ. ಮಡಿವಾಳ ಠಾಣೆ ಸದ್ಯ ಸೀಲ್ಡೌನ್ ಆಗಿರುವುದರಿಂದ, ಕೋರಮಂಗಲ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p>.<p>‘ಖಾಸಗಿ ಕಂಪನಿ ಉದ್ಯೋಗಿಯಾದ ಗೌರವ್ ಹಾಗೂ ಅವರ ಸ್ನೇಹಿತ, ಜೂನ್ 27ರಂದು ರಾತ್ರಿ ಕೆಲಸ ಮುಗಿಸಿಕೊಂಡು ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್ ಬಳಿ ಹೊರಟಿದ್ದರು. ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಮೊಬೈಲ್ ಮತ್ತು ಪರ್ಸ್ ನೀಡುವಂತೆ ಚಾಕು ತೋರಿಸಿ ಬೆದರಿಸಿದ್ದರು. ಈ ಸಂಗತಿ ಗೌರವ್ ನೀಡಿರುವ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮೊಬೈಲ್ ಮತ್ತು ಪರ್ಸ್ ನೀಡಲು ಒಪ್ಪದಿದ್ದಾಗ ಗೌರವ್ ಅವರ ಬೆರಳಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಇತರೆ ದುಷ್ಕರ್ಮಿಗಳು, ಗೌರವ್ ಹಾಗೂ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ’ ಎಂದೂ ತಿಳಿಸಿದರು.</p>.<p>‘ಗಾಯಗೊಂಡಿದ್ದ ಇಬ್ಬರನ್ನೂ ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಗೌರವ್ ದೂರು ನೀಡಿದ್ದಾರೆ. ಘಟನೆ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಕೈ ಬೆರಳಿಗೆ ಚಾಕುವಿನಿಂದ ಇರಿದು ಸುಲಿಗೆಗೆ ಯತ್ನಿಸಿ ಪರಾರಿಯಾಗಿದ್ದಾರೆ.</p>.<p>ಈ ಸಂಬಂಧ ಸವಾರ ಗೌರವ್ ಅಗರವಾಲ್ ಎಂಬುವರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ. ಮಡಿವಾಳ ಠಾಣೆ ಸದ್ಯ ಸೀಲ್ಡೌನ್ ಆಗಿರುವುದರಿಂದ, ಕೋರಮಂಗಲ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.</p>.<p>‘ಖಾಸಗಿ ಕಂಪನಿ ಉದ್ಯೋಗಿಯಾದ ಗೌರವ್ ಹಾಗೂ ಅವರ ಸ್ನೇಹಿತ, ಜೂನ್ 27ರಂದು ರಾತ್ರಿ ಕೆಲಸ ಮುಗಿಸಿಕೊಂಡು ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್ ಬಳಿ ಹೊರಟಿದ್ದರು. ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಮೊಬೈಲ್ ಮತ್ತು ಪರ್ಸ್ ನೀಡುವಂತೆ ಚಾಕು ತೋರಿಸಿ ಬೆದರಿಸಿದ್ದರು. ಈ ಸಂಗತಿ ಗೌರವ್ ನೀಡಿರುವ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮೊಬೈಲ್ ಮತ್ತು ಪರ್ಸ್ ನೀಡಲು ಒಪ್ಪದಿದ್ದಾಗ ಗೌರವ್ ಅವರ ಬೆರಳಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಇತರೆ ದುಷ್ಕರ್ಮಿಗಳು, ಗೌರವ್ ಹಾಗೂ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ’ ಎಂದೂ ತಿಳಿಸಿದರು.</p>.<p>‘ಗಾಯಗೊಂಡಿದ್ದ ಇಬ್ಬರನ್ನೂ ಸ್ಥಳೀಯರೇ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಗೌರವ್ ದೂರು ನೀಡಿದ್ದಾರೆ. ಘಟನೆ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>