‘ಚಿಕ್ಕ ವಯಸ್ಸಿನಿಂದಲೇ ಅಪರಾಧ ಕೃತ್ಯ ಎಸಗುತ್ತಿರುವ ಧನುಷ್, ಮದ್ಯಪಾನ ಹಾಗೂ ಧೂಮಪಾನ ವ್ಯಸನಿ. ದುಶ್ಚಟಗಳಿಗೆ ಹಣ ಹೊಂದಿಸಲು ಆತ ಸುಲಿಗೆ ಮಾಡುತ್ತಿದ್ದ. ಸಂಜಯನಗರ, ಕೊಡಿಗೇಹಳ್ಳಿ, ಸದಾಶಿವನಗರ, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಹೆಬ್ಬಾಳ, ಆರ್.ಟಿ.ನಗರ, ಕೆ.ಆರ್.ಪುರ, ಎಚ್ಎಎಲ್ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿಯೂ ಧನುಷ್ ಸುಲಿಗೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದರು.