<p><strong>ಬೆಂಗಳೂರು</strong>: ಸುಲಿಗೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನು ಮೇಲೆ ಹೊರಬಂದು ಮನೆಗಳಲ್ಲಿ ಕಳವು ಮಾಡುತ್ತಿದ್ದ ಆರೋಪದಡಿ ಮೆಹಬೂಬ್ ಪಾಷಾ (22) ಎಂಬುವರನ್ನು ಸಂಜಯ್ನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಚಂದ್ರಾಲೇಔಟ್ ಬಳಿಯ ಗಂಗೊಂಡನಹಳ್ಳಿಯ ಮೆಹಬೂಬ್ ಪಾಷಾ, ಅಪರಾಧ ಹಿನ್ನೆಲೆಯುಳ್ಳವ. ಆತನಿಂದ ₹2.40 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಡಾಲರ್ಸ್ ಕಾಲೊನಿಯ 3ನೇ ಮುಖ್ಯರಸ್ತೆಯಲ್ಲಿರುವ ವಿಷುಕುಮಾರ್ ಎಂಬುವರು ಜೂನ್ 18ರಂದು ಮನೆ ಬೀಗ ಹಾಕಿಕೊಂಡು ಪತ್ನಿ ಜೊತೆ ಹಾಸನಕ್ಕೆ ಹೋಗಿದ್ದರು. ಮನೆ ಮುಂದೆ ರಂಗೋಲಿ ಇಲ್ಲದಿದ್ದನ್ನು ಹಾಗೂ ಬೀಗ ಹಾಕಿದ್ದನ್ನು ಗಮನಿಸಿದ್ದ ಆರೋಪಿ, ರಾತ್ರಿ ವೇಳೆ ಮನೆಗೆ ನುಗ್ಗಿ ಕಳವು ಮಾಡಿದ್ದ.’</p>.<p>‘ಮನೆ ಮಾಲೀಕ ವಿಷುಕುಮಾರ್ ಅವರು ಜೂ. 22ರಂದು ರಾತ್ರಿ ವಾಪಸು ಮನೆಗೆ ಬಂದಿದ್ದಾಗಲೇ ಕಳ್ಳತನ ಗಮನಕ್ಕೆ ಬಂದಿತ್ತು. ಆ ಬಗ್ಗೆ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿಯನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಆರೋಪಿ ಮೆಹಬೂಬ್ ವಿರುದ್ಧ 2018ರಲ್ಲಿ ಚಂದ್ರಾಲೇಔಟ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಅದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸುಲಿಗೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನು ಮೇಲೆ ಹೊರಬಂದು ಮನೆಗಳಲ್ಲಿ ಕಳವು ಮಾಡುತ್ತಿದ್ದ ಆರೋಪದಡಿ ಮೆಹಬೂಬ್ ಪಾಷಾ (22) ಎಂಬುವರನ್ನು ಸಂಜಯ್ನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಚಂದ್ರಾಲೇಔಟ್ ಬಳಿಯ ಗಂಗೊಂಡನಹಳ್ಳಿಯ ಮೆಹಬೂಬ್ ಪಾಷಾ, ಅಪರಾಧ ಹಿನ್ನೆಲೆಯುಳ್ಳವ. ಆತನಿಂದ ₹2.40 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಡಾಲರ್ಸ್ ಕಾಲೊನಿಯ 3ನೇ ಮುಖ್ಯರಸ್ತೆಯಲ್ಲಿರುವ ವಿಷುಕುಮಾರ್ ಎಂಬುವರು ಜೂನ್ 18ರಂದು ಮನೆ ಬೀಗ ಹಾಕಿಕೊಂಡು ಪತ್ನಿ ಜೊತೆ ಹಾಸನಕ್ಕೆ ಹೋಗಿದ್ದರು. ಮನೆ ಮುಂದೆ ರಂಗೋಲಿ ಇಲ್ಲದಿದ್ದನ್ನು ಹಾಗೂ ಬೀಗ ಹಾಕಿದ್ದನ್ನು ಗಮನಿಸಿದ್ದ ಆರೋಪಿ, ರಾತ್ರಿ ವೇಳೆ ಮನೆಗೆ ನುಗ್ಗಿ ಕಳವು ಮಾಡಿದ್ದ.’</p>.<p>‘ಮನೆ ಮಾಲೀಕ ವಿಷುಕುಮಾರ್ ಅವರು ಜೂ. 22ರಂದು ರಾತ್ರಿ ವಾಪಸು ಮನೆಗೆ ಬಂದಿದ್ದಾಗಲೇ ಕಳ್ಳತನ ಗಮನಕ್ಕೆ ಬಂದಿತ್ತು. ಆ ಬಗ್ಗೆ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿಯನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಆರೋಪಿ ಮೆಹಬೂಬ್ ವಿರುದ್ಧ 2018ರಲ್ಲಿ ಚಂದ್ರಾಲೇಔಟ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಅದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>