ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆಗೆ ಸಂಚು: ರೌಡಿ ಟಕ್ಲಾ ಬಂಧನ

Last Updated 10 ಜೂನ್ 2022, 19:46 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ರೌಡಿ ಪವನ್‌ ಅಲಿಯಾಸ್ ಟಕ್ಲಾ ಹಾಗೂ ಆತನ ಐವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದ ಪೈಪ್‌ಲೈನ್ ರಸ್ತೆಯಲ್ಲಿ ರೌಡಿ ಹಾಗೂ ಆತನ ಸಹಚರರು ಇರುವ ಮಾಹಿತಿ ಸಿಕ್ಕಿತ್ತು. ಅವರೆಲ್ಲರನ್ನೂ ಬಂಧಿಸಲಾಗಿದೆ. ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡುವುದು ಆರೋಪಿಗಳ ಉದ್ದೇಶವಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT