‘ಚೇಳಿಕೆರೆ ಬಳಿಯ ಪೂಜಪ್ಪ ಬಡಾವಣೆಯಲ್ಲಿ ಆರೋಪಿಗಳು ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ಆರೋಪಿಯನ್ನು ವಿಚಾರಿಸಿದ್ದರು. ಇದೇ ಸಂದರ್ಭದಲ್ಲಿ ಆರೋಪಿಗಳ ಬಳಿ ಮಾರಕಾಸ್ತ್ರಗಳಿರುವುದು ಗೊತ್ತಾಗಿತ್ತು. ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ, ಅಪರಾಧ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಸಂಗತಿ ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದರು.