<p><strong>ಬೆಂಗಳೂರು</strong>: ಹುಲಿಮಂಗಲ ಗ್ರಾಮದ ಎಲಿಗೆನ್ಸ್ ಅಪಾರ್ಟ್ಮೆಂಟ್ನಲ್ಲಿ ನೆಲಸಿರುವ ಉದ್ಯಮಿಯೊಬ್ಬರ ಫ್ಲ್ಯಾಟ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಹೆಬ್ಬಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಸುಂಕದಕಟ್ಟೆಯ ವಿಘ್ನೇಶ್ವರ ನಗರದ ಎಚ್.ಕೆ.ಶ್ರೀನಿವಾಸಮೂರ್ತಿ ಹಾಗೂ ದಾಸನಪುರ ಹೋಬಳಿ ಚಿಕ್ಕಗೊಲ್ಲರಹಟ್ಟಿ ಗ್ರಾಮದ ಬಿ.ಎನ್.ಅರುಣ್ಕುಮಾರ್ ಬಂಧಿತರು.</p>.<p>ಚಿಕ್ಕಪೇಟೆಯಲ್ಲಿ ಶ್ರೀನಿವಾಸಮೂರ್ತಿ ಅವರು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಅರುಣ್ ಅವರು ನೈಸ್ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.</p>.<p>‘ಬಂಧಿತರಿಂದ 16 ಗ್ರಾಂ ಚಿನ್ನಾಭರಣ, ಒಂದು ಕಾರು ಹಾಗೂ ₹1.14 ಕೋಟಿ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆರ್.ಸುನಿಲ್ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಪ್ರಿಸಮ್ ಸರ್ಫೆಸ್ ಕೋಟಿಂಗ್ ಕಂಪನಿ ಮಾಲೀಕ ಸುನಿಲ್ ಕುಮಾರ್ ಅವರು ಉದ್ಯಮದ ವ್ಯವಹಾರಕ್ಕಾಗಿ ₹1.14 ಕೋಟಿ ನಗದನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ಫ್ಲ್ಯಾಟ್ನಲ್ಲಿ ಹಣವಿದ್ದ ಮಾಹಿತಿಯನ್ನು ಆರೋಪಿಗಳು ತಿಳಿದುಕೊಂಡಿದ್ದರು. ನ.7ರಂದು ಸುನಿಲ್ ಅವರು ಕುಟುಂಬ ಸಮೇತ ಕೋಲಾರಕ್ಕೆ ತೆರಳಿದ್ದರು. ಅಂದು ಫ್ಲ್ಯಾಟ್ಗೆ ಬಂದಿದ್ದ ಆರೋಪಿಗಳು, ಬೀಗ ಒಡೆದು ಬೀರುವಿನಲ್ಲಿದ್ದ ನಗದು ಕಳ್ಳತನ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಸುಳಿವು ಆಧರಿಸಿ ಚಿಕ್ಕಪೇಟೆ ಹಾಗೂ ದಾಸನಪುರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹುಲಿಮಂಗಲ ಗ್ರಾಮದ ಎಲಿಗೆನ್ಸ್ ಅಪಾರ್ಟ್ಮೆಂಟ್ನಲ್ಲಿ ನೆಲಸಿರುವ ಉದ್ಯಮಿಯೊಬ್ಬರ ಫ್ಲ್ಯಾಟ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಹೆಬ್ಬಗೋಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಸುಂಕದಕಟ್ಟೆಯ ವಿಘ್ನೇಶ್ವರ ನಗರದ ಎಚ್.ಕೆ.ಶ್ರೀನಿವಾಸಮೂರ್ತಿ ಹಾಗೂ ದಾಸನಪುರ ಹೋಬಳಿ ಚಿಕ್ಕಗೊಲ್ಲರಹಟ್ಟಿ ಗ್ರಾಮದ ಬಿ.ಎನ್.ಅರುಣ್ಕುಮಾರ್ ಬಂಧಿತರು.</p>.<p>ಚಿಕ್ಕಪೇಟೆಯಲ್ಲಿ ಶ್ರೀನಿವಾಸಮೂರ್ತಿ ಅವರು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಅರುಣ್ ಅವರು ನೈಸ್ ಕಂಪನಿಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.</p>.<p>‘ಬಂಧಿತರಿಂದ 16 ಗ್ರಾಂ ಚಿನ್ನಾಭರಣ, ಒಂದು ಕಾರು ಹಾಗೂ ₹1.14 ಕೋಟಿ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>ಆರ್.ಸುನಿಲ್ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಪ್ರಿಸಮ್ ಸರ್ಫೆಸ್ ಕೋಟಿಂಗ್ ಕಂಪನಿ ಮಾಲೀಕ ಸುನಿಲ್ ಕುಮಾರ್ ಅವರು ಉದ್ಯಮದ ವ್ಯವಹಾರಕ್ಕಾಗಿ ₹1.14 ಕೋಟಿ ನಗದನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು. ಫ್ಲ್ಯಾಟ್ನಲ್ಲಿ ಹಣವಿದ್ದ ಮಾಹಿತಿಯನ್ನು ಆರೋಪಿಗಳು ತಿಳಿದುಕೊಂಡಿದ್ದರು. ನ.7ರಂದು ಸುನಿಲ್ ಅವರು ಕುಟುಂಬ ಸಮೇತ ಕೋಲಾರಕ್ಕೆ ತೆರಳಿದ್ದರು. ಅಂದು ಫ್ಲ್ಯಾಟ್ಗೆ ಬಂದಿದ್ದ ಆರೋಪಿಗಳು, ಬೀಗ ಒಡೆದು ಬೀರುವಿನಲ್ಲಿದ್ದ ನಗದು ಕಳ್ಳತನ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಸುಳಿವು ಆಧರಿಸಿ ಚಿಕ್ಕಪೇಟೆ ಹಾಗೂ ದಾಸನಪುರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>