<p><strong>ಬೆಂಗಳೂರು:</strong> ರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಅರಸೀಕೆರೆಯ ಪರಮೇಶ್ವರಯ್ಯ, ಜಗದೀಶ್ ಹಾಗೂ ಶಶಿಕುಮಾರ್ ಬಂಧಿತರು. ಅವರಿಂದ ₹ 17 ಲಕ್ಷ ಮೌಲ್ಯದ 347 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಚಾಕು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸಂಬಂಧಿಕರೇ ಆಗಿರುವ ಆರೋಪಿಗಳು, ಕೆಲಸ ಹುಡುಕಿಕೊಂಡು ಐದು ವರ್ಷಗಳ ಹಿಂದೆಯೇ ನಗರಕ್ಕೆ ಬಂದಿದ್ದರು. ಪರಮೇಶ್ವರಯ್ಯ ಹಾಗೂ ಜಗದೀಶ್, ಪೇಟಿಂಗ್ ಕೆಲಸಕ್ಕೆ ಸೇರಿದ್ದರು. ಶಶಿಕುಮಾರ್, ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.’</p>.<p>‘ಕುಟುಂಬ ನಿರ್ವಹಣೆಗೆ ಸಂಬಳ ಸಾಲದ ಕಾರಣ ಆರೋಪಿಗಳು, ಸುಲಿಗೆ ಮಾಡಲು ಸಂಚು ರೂಪಿಸಿದ್ದರು. ಸರದಿ ಪ್ರಕಾರ ಪಲ್ಸರ್ ಬೈಕ್ನಲ್ಲಿ ಸುತ್ತಾಡಿ ಸಾರ್ವಜನಿಕರನ್ನು ಬೆದರಿಸಿ ಚಿನ್ನಾಭರಣ ಹಾಗೂ ಮೊಬೈಲ್ ಕಿತ್ತೊಯ್ಯುತ್ತಿದ್ದರು. ಚಿನ್ನಾಭರಣವನ್ನು ಅಡವಿಟ್ಟು, ಅದರಿಂದ ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು’ ಎಂದೂ ಮೂಲಗಳು ಹೇಳಿವೆ.</p>.<p>‘ನಿತ್ಯವೂ ಕೃತ್ಯ ಎಸಗಿದರೆ ಪೊಲೀಸರು ಬಂಧಿಸುತ್ತಾರೆಂಬ ಆತಂಕ ಆರೋಪಿಗಳಲ್ಲಿ ಇತ್ತು. ಹೀಗಾಗಿ, ಅವರು ತಿಂಗಳಿಗೊಮ್ಮೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದೇ ಕಾರಣಕ್ಕೆ, 2018ರಿಂದ ಕೃತ್ಯ ಎಸಗಿದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ.’</p>.<p>‘ಅನ್ನಪೂರ್ಣೇಶ್ವರಿನಗರ, ಬಸವೇಶ್ವರನಗರ, ರಾಜರಾಜೇಶ್ವರಿನಗರ, ದಾಬಸ್ಪೇಟೆ, ಹೊಸಕೋಟೆ, ಮಾದನಾಯಕನಹಳ್ಳಿ, ಕೊರಟಗೆರೆ, ನಾಗಮಂಗಲ, ಬೆಸಗರನಹಳ್ಳಿ ಹಾಗೂ ಐಜೂರು ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಸುಲಿಗೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.’</p>.<p class="Subhead">ಸಿ.ಸಿ.ಟಿ.ವಿ ಕ್ಯಾಮೆರಾ ಸುಳಿವು: ‘ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ನಿವಾಸಿಯೊಬ್ಬರು ಆ. 26ರಂದು ವಾಯುವಿಹಾರ ಮಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ನಿವಾಸಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ, ಆರೋಪಿಗಳ ಸುಳಿವು ಸಿಕ್ಕಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ಅರಸೀಕೆರೆಯ ಪರಮೇಶ್ವರಯ್ಯ, ಜಗದೀಶ್ ಹಾಗೂ ಶಶಿಕುಮಾರ್ ಬಂಧಿತರು. ಅವರಿಂದ ₹ 17 ಲಕ್ಷ ಮೌಲ್ಯದ 347 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಚಾಕು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸಂಬಂಧಿಕರೇ ಆಗಿರುವ ಆರೋಪಿಗಳು, ಕೆಲಸ ಹುಡುಕಿಕೊಂಡು ಐದು ವರ್ಷಗಳ ಹಿಂದೆಯೇ ನಗರಕ್ಕೆ ಬಂದಿದ್ದರು. ಪರಮೇಶ್ವರಯ್ಯ ಹಾಗೂ ಜಗದೀಶ್, ಪೇಟಿಂಗ್ ಕೆಲಸಕ್ಕೆ ಸೇರಿದ್ದರು. ಶಶಿಕುಮಾರ್, ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.’</p>.<p>‘ಕುಟುಂಬ ನಿರ್ವಹಣೆಗೆ ಸಂಬಳ ಸಾಲದ ಕಾರಣ ಆರೋಪಿಗಳು, ಸುಲಿಗೆ ಮಾಡಲು ಸಂಚು ರೂಪಿಸಿದ್ದರು. ಸರದಿ ಪ್ರಕಾರ ಪಲ್ಸರ್ ಬೈಕ್ನಲ್ಲಿ ಸುತ್ತಾಡಿ ಸಾರ್ವಜನಿಕರನ್ನು ಬೆದರಿಸಿ ಚಿನ್ನಾಭರಣ ಹಾಗೂ ಮೊಬೈಲ್ ಕಿತ್ತೊಯ್ಯುತ್ತಿದ್ದರು. ಚಿನ್ನಾಭರಣವನ್ನು ಅಡವಿಟ್ಟು, ಅದರಿಂದ ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು’ ಎಂದೂ ಮೂಲಗಳು ಹೇಳಿವೆ.</p>.<p>‘ನಿತ್ಯವೂ ಕೃತ್ಯ ಎಸಗಿದರೆ ಪೊಲೀಸರು ಬಂಧಿಸುತ್ತಾರೆಂಬ ಆತಂಕ ಆರೋಪಿಗಳಲ್ಲಿ ಇತ್ತು. ಹೀಗಾಗಿ, ಅವರು ತಿಂಗಳಿಗೊಮ್ಮೆ ಮಾತ್ರ ಸುಲಿಗೆ ಮಾಡುತ್ತಿದ್ದರು. ಅದೇ ಕಾರಣಕ್ಕೆ, 2018ರಿಂದ ಕೃತ್ಯ ಎಸಗಿದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ.’</p>.<p>‘ಅನ್ನಪೂರ್ಣೇಶ್ವರಿನಗರ, ಬಸವೇಶ್ವರನಗರ, ರಾಜರಾಜೇಶ್ವರಿನಗರ, ದಾಬಸ್ಪೇಟೆ, ಹೊಸಕೋಟೆ, ಮಾದನಾಯಕನಹಳ್ಳಿ, ಕೊರಟಗೆರೆ, ನಾಗಮಂಗಲ, ಬೆಸಗರನಹಳ್ಳಿ ಹಾಗೂ ಐಜೂರು ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಸುಲಿಗೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.’</p>.<p class="Subhead">ಸಿ.ಸಿ.ಟಿ.ವಿ ಕ್ಯಾಮೆರಾ ಸುಳಿವು: ‘ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ನಿವಾಸಿಯೊಬ್ಬರು ಆ. 26ರಂದು ವಾಯುವಿಹಾರ ಮಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿ 22 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ನಿವಾಸಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು. ಘಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ, ಆರೋಪಿಗಳ ಸುಳಿವು ಸಿಕ್ಕಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>