‘ಹೊಸ ಗುಡ್ಡದಹಳ್ಳಿ ಸಿಗ್ನಲ್ನಲ್ಲಿ ಕಾರು ನಿಂತಿದ್ದು, ಕಾರಿನ ಎದುರು ದ್ವಿಚಕ್ರ ವಾಹನ ನಿಲ್ಲಿಸಿದ್ದ ಆರೋಪಿಗಳು, ದೂರುದಾರರ ಜೊತೆ ಜಗಳ ತೆಗೆದಿದ್ದರು. ಮಾರಕಾಸ್ತ್ರದಿಂದ ಕೈಗೆ ಹೊಡೆದಿದ್ದರು. ಆಗ ಆರೋಪಿಯೊಬ್ಬ, ಕಾರಿನ ಹಿಂಬದಿ ಗಾಜು ಒಡೆದು ಹಣದ ಬ್ಯಾಗ್ ಎತ್ತಿಕೊಂಡು ಓಡಿಹೋಗಿದ್ದ. ದೂರುದಾರ ಬೆನ್ನಟ್ಟಿ ಹಿಡಿಯಲು ಹೋಗಿ ವಿಫಲರಾಗಿದ್ದರು. ಇತ್ತ ಉಳಿದವರು ಪರಾರಿಯಾಗಿದ್ದರು’ ಎಂದು ತಿಳಿಸಿವೆ.