<p><strong>ಬೆಂಗಳೂರು:</strong> ರೊಬೊಟಿಕ್ ತಂತ್ರಜ್ಞಾನ ಆಧಾರಿತ ಮಂಡಿ ಚಿಪ್ಪು ಬದಲಿ ಶಸ್ತ್ರಚಿಕಿತ್ಸೆ ಕಾರ್ಯಾಗಾರವು ಪಿಇಎಸ್ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ನಲ್ಲಿರುವ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಕ್ರವಾರ ನಡೆಯಿತು.</p>.<p>ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ಕಾರ್ಯಾಗಾರ ಉದ್ಘಾಟಿಸಿದರು.</p>.<p>ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್. ದೊರೆಸ್ವಾಮಿ ಮತ್ತು ಸಮ-ಕುಲಾಧಿಪತಿ ಜವಾಹರ್ ದೊರೆಸ್ವಾಮಿ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.</p>.<p>ಒಂದೇ ದಿನದಲ್ಲಿ 3 ವಿಭಿನ್ನ ರೊಬೋಟಿಕ್ ವ್ಯವಸ್ಥೆಗಳೊಂದಿಗೆ 4 ಮಂಡಿ ಚಿಪ್ಪು ಬದಲಿ ಶಸ್ತ್ರಚಿಕಿತ್ಸೆಗಳನ್ನು ನೇರ ಪ್ರಸಾರ ಮಾಡಲಾಯಿತು.</p>.<p>ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಅವಿನಾಶ್ ಮಾತನಾಡಿ, ‘ರೊಬೊಟಿಕ್ಸ್ ಪರಿಕಲ್ಪನೆ ಭಾರತಕ್ಕೆ ಹೊಸದಲ್ಲ’ ಎಂದು ಪ್ರತಿಪಾದಿಸಿದರು.</p>.<p>‘ತಾಂತ್ರಿಕ ಕ್ರಾಂತಿಯ ಮಧ್ಯೆ ಯಂತ್ರ ಕಲಿಕೆ, ಆಳವಾದ ಕಲಿಕೆ ಮತ್ತು ಕೃತಕ ಬುದ್ಧಿಮತ್ತೆ ನಮ್ಮ ಜೀವನವನ್ನು ಪರಿವರ್ತಿಸುತ್ತಿದೆ’ ಎಂದು ತಿಳಿಸಿದರು.</p>.<p>ಪಿಇಎಸ್ ವೈದ್ಯಕೀಯ ಕಾಲೇಜಿನ ಸಹಾಯಕ ವೈದ್ಯಕೀಯ ನಿರ್ದೇಶಕಿ ಡಾ. ರೂಪಾ ಸುರೇಶ್, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಜೆ.ಸೂರ್ಯಪ್ರಸಾದ್, ಸಮ-ಕುಲಪತಿ ಡಾ.ನಾಗಾರ್ಜುನ ಸಾದಿನೇನಿ, ಡೀನ್ ಡಾ. ಹರಿಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರೊಬೊಟಿಕ್ ತಂತ್ರಜ್ಞಾನ ಆಧಾರಿತ ಮಂಡಿ ಚಿಪ್ಪು ಬದಲಿ ಶಸ್ತ್ರಚಿಕಿತ್ಸೆ ಕಾರ್ಯಾಗಾರವು ಪಿಇಎಸ್ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ನಲ್ಲಿರುವ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಕ್ರವಾರ ನಡೆಯಿತು.</p>.<p>ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ಕಾರ್ಯಾಗಾರ ಉದ್ಘಾಟಿಸಿದರು.</p>.<p>ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್. ದೊರೆಸ್ವಾಮಿ ಮತ್ತು ಸಮ-ಕುಲಾಧಿಪತಿ ಜವಾಹರ್ ದೊರೆಸ್ವಾಮಿ ಮತ್ತು ಪಿಇಎಸ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಸುರೇಶ್ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಗಾರ ನಡೆಯಿತು.</p>.<p>ಒಂದೇ ದಿನದಲ್ಲಿ 3 ವಿಭಿನ್ನ ರೊಬೋಟಿಕ್ ವ್ಯವಸ್ಥೆಗಳೊಂದಿಗೆ 4 ಮಂಡಿ ಚಿಪ್ಪು ಬದಲಿ ಶಸ್ತ್ರಚಿಕಿತ್ಸೆಗಳನ್ನು ನೇರ ಪ್ರಸಾರ ಮಾಡಲಾಯಿತು.</p>.<p>ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಅವಿನಾಶ್ ಮಾತನಾಡಿ, ‘ರೊಬೊಟಿಕ್ಸ್ ಪರಿಕಲ್ಪನೆ ಭಾರತಕ್ಕೆ ಹೊಸದಲ್ಲ’ ಎಂದು ಪ್ರತಿಪಾದಿಸಿದರು.</p>.<p>‘ತಾಂತ್ರಿಕ ಕ್ರಾಂತಿಯ ಮಧ್ಯೆ ಯಂತ್ರ ಕಲಿಕೆ, ಆಳವಾದ ಕಲಿಕೆ ಮತ್ತು ಕೃತಕ ಬುದ್ಧಿಮತ್ತೆ ನಮ್ಮ ಜೀವನವನ್ನು ಪರಿವರ್ತಿಸುತ್ತಿದೆ’ ಎಂದು ತಿಳಿಸಿದರು.</p>.<p>ಪಿಇಎಸ್ ವೈದ್ಯಕೀಯ ಕಾಲೇಜಿನ ಸಹಾಯಕ ವೈದ್ಯಕೀಯ ನಿರ್ದೇಶಕಿ ಡಾ. ರೂಪಾ ಸುರೇಶ್, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಜೆ.ಸೂರ್ಯಪ್ರಸಾದ್, ಸಮ-ಕುಲಪತಿ ಡಾ.ನಾಗಾರ್ಜುನ ಸಾದಿನೇನಿ, ಡೀನ್ ಡಾ. ಹರಿಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>