<p><strong>ಬೆಂಗಳೂರು</strong>: ರೊಬೊಟಿಕ್ ತಂತ್ರಜ್ಞಾನದ ನೆರವಿನಿಂದ ವಿರೂಪಗೊಂಡ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈವರೆಗೂ ಒಂದು ಸಾವಿರ ರೋಗಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಮಣಿಪಾಲ ಆಸ್ಪತ್ರೆಯ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಮತ್ತು ಕನ್ಸಲ್ಟೆಂಟ್ ವಿಭಾಗದ ಮುಖಸ್ಥ ಡಾ. ಎಸ್ ವಿದ್ಯಾಧರ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆನ್ನುಮೂಳೆ ಊನತೆಯಿಂದ ಸಮಸ್ಯೆ ಎದುರಿಸುತ್ತಿದ್ದ ಹಲವರಿಗೆ ರೊಬೊಟಿಕ್ ತಂತ್ರಜ್ಞಾನದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಮಸ್ಯೆ ನಿವಾರಣೆಯಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ರೋಗಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.</p><p>ಬಾಲಕನಿಗೆ ಬೆನ್ನುಮೂಳೆ ವಿರೂಪಗೊಂಡು, ದೈನಂದಿನ ಚಟುವಟಿಕೆ ಕಷ್ಟವಾಗಿತ್ತು. ರೊಬೊಟಿಕ್ ತಂತ್ರಜ್ಞಾನದ ನೆರವಿನಿಂದ ವಿರೂಪಗೊಂಡ ಬೆನ್ನುಮೂಳೆ ಸರಿಪಡಿಸಿ, ಸ್ಕ್ರೂ ಅಳವಡಿಸಲಾಯಿತು. ಇದೇ ರೀತಿ, ಇಲ್ಲಿನ ಯುವಕನೊಬ್ಬ ಬೆನ್ನುಮೂಳೆ ಊನತೆಯಿಂದ ಸಮಸ್ಯೆ ಎದುರಿಸುತ್ತಿದ್ದ. ಆತನಿಗೂ ಇದೇ ರೀತಿಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವಿವರಿಸಿದರು. </p><p>ನಿರಂತರ ಒಂದೆಡೆ ಕುಳಿತು ಕೆಲಸ ಮಾಡುವುದು, ಹೆಚ್ಚು ಹೊತ್ತು ವಾಹನ ಚಲಾಯಿಸುವುದು, ಭಾರವಾದ ವಸ್ತುಗಳನ್ನು ಎತ್ತುವುದರಿಂದ ಬೆನ್ನುನೋವಿನ ಸಮಸ್ಯೆ ಹೆಚ್ಚಾಗುತ್ತಿದೆ. ಆರಂಭದಲ್ಲಿಯೇ ಕಾಯಿಲೆ ಪತ್ತೆಹಚ್ಚಿ, ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ ಎಂದರು.</p><p>11 ವರ್ಷದ ಬಾಲಕ ತ್ರಿಭುವನ್ ಗೌಡ ಮತ್ತವರ ಪೋಷಕರು ತಮ್ಮ ಮಗ ಅನುಭವಿಸಿದ ಬೆನ್ನುಮೂಳೆಯ ಸಮಸ್ಯೆ ಹಾಗೂ ರೊಬೊಟಿಕ್ ಸರ್ಜರಿ ಹೇಗೆ ಸಹಕಾರಿಯಾಯಿತು ಎಂಬುದರ ಬಗ್ಗೆ ಮಾಹಿತಿ ಹಂಚಿಕೊಂಡರು.</p><p>‘ಮಗನಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಹೇಗೆ ಮಾಡುತ್ತಾರೆ ಎಂಬ ಭಯವಿತ್ತು. ಆದರೆ, ವೈದ್ಯರು ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ್ದು, ಭರವಸೆ ಮೂಡಿತು. ಈಗ ಮಗನ ಆರೋಗ್ಯದಲ್ಲಿ ಬದಲಾವಣೆ ಕಂಡಿದೆ’ ಎಂದು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೊಬೊಟಿಕ್ ತಂತ್ರಜ್ಞಾನದ ನೆರವಿನಿಂದ ವಿರೂಪಗೊಂಡ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈವರೆಗೂ ಒಂದು ಸಾವಿರ ರೋಗಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಮಣಿಪಾಲ ಆಸ್ಪತ್ರೆಯ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ಮತ್ತು ಕನ್ಸಲ್ಟೆಂಟ್ ವಿಭಾಗದ ಮುಖಸ್ಥ ಡಾ. ಎಸ್ ವಿದ್ಯಾಧರ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆನ್ನುಮೂಳೆ ಊನತೆಯಿಂದ ಸಮಸ್ಯೆ ಎದುರಿಸುತ್ತಿದ್ದ ಹಲವರಿಗೆ ರೊಬೊಟಿಕ್ ತಂತ್ರಜ್ಞಾನದಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸಮಸ್ಯೆ ನಿವಾರಣೆಯಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ರೋಗಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.</p><p>ಬಾಲಕನಿಗೆ ಬೆನ್ನುಮೂಳೆ ವಿರೂಪಗೊಂಡು, ದೈನಂದಿನ ಚಟುವಟಿಕೆ ಕಷ್ಟವಾಗಿತ್ತು. ರೊಬೊಟಿಕ್ ತಂತ್ರಜ್ಞಾನದ ನೆರವಿನಿಂದ ವಿರೂಪಗೊಂಡ ಬೆನ್ನುಮೂಳೆ ಸರಿಪಡಿಸಿ, ಸ್ಕ್ರೂ ಅಳವಡಿಸಲಾಯಿತು. ಇದೇ ರೀತಿ, ಇಲ್ಲಿನ ಯುವಕನೊಬ್ಬ ಬೆನ್ನುಮೂಳೆ ಊನತೆಯಿಂದ ಸಮಸ್ಯೆ ಎದುರಿಸುತ್ತಿದ್ದ. ಆತನಿಗೂ ಇದೇ ರೀತಿಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವಿವರಿಸಿದರು. </p><p>ನಿರಂತರ ಒಂದೆಡೆ ಕುಳಿತು ಕೆಲಸ ಮಾಡುವುದು, ಹೆಚ್ಚು ಹೊತ್ತು ವಾಹನ ಚಲಾಯಿಸುವುದು, ಭಾರವಾದ ವಸ್ತುಗಳನ್ನು ಎತ್ತುವುದರಿಂದ ಬೆನ್ನುನೋವಿನ ಸಮಸ್ಯೆ ಹೆಚ್ಚಾಗುತ್ತಿದೆ. ಆರಂಭದಲ್ಲಿಯೇ ಕಾಯಿಲೆ ಪತ್ತೆಹಚ್ಚಿ, ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ ಎಂದರು.</p><p>11 ವರ್ಷದ ಬಾಲಕ ತ್ರಿಭುವನ್ ಗೌಡ ಮತ್ತವರ ಪೋಷಕರು ತಮ್ಮ ಮಗ ಅನುಭವಿಸಿದ ಬೆನ್ನುಮೂಳೆಯ ಸಮಸ್ಯೆ ಹಾಗೂ ರೊಬೊಟಿಕ್ ಸರ್ಜರಿ ಹೇಗೆ ಸಹಕಾರಿಯಾಯಿತು ಎಂಬುದರ ಬಗ್ಗೆ ಮಾಹಿತಿ ಹಂಚಿಕೊಂಡರು.</p><p>‘ಮಗನಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಹೇಗೆ ಮಾಡುತ್ತಾರೆ ಎಂಬ ಭಯವಿತ್ತು. ಆದರೆ, ವೈದ್ಯರು ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದ್ದು, ಭರವಸೆ ಮೂಡಿತು. ಈಗ ಮಗನ ಆರೋಗ್ಯದಲ್ಲಿ ಬದಲಾವಣೆ ಕಂಡಿದೆ’ ಎಂದು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>