<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ವೈದ್ಯರು ಬೆನ್ನುಮೂಳೆ ಸಮಸ್ಯೆಯಿಂದ ಬಳಲುತ್ತಿದ್ದ ಮೂವರಿಗೆ ರೊಬೊಟಿಕ್ ತಂತ್ರಜ್ಞಾನದ ನೆರವಿನಿಂದ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. </p>.<p>ಬೆನ್ನುಮೂಳೆ ಕ್ಷಯ ರೋಗದಿಂದ ಬಳಲುತ್ತಿದ್ದ 14 ವರ್ಷದ ಉಷಾ ಎಚ್.ಎಂ., ‘ಸ್ಕೋಲಿಯೋಸಿಸ್’ ಸಮಸ್ಯೆ ಎದುರಿಸುತ್ತಿದ್ದ 17 ವರ್ಷದ ಸಾಜಿಯಾ ಐಮನ್ ಮತ್ತು ‘ಬ್ರೂಸೆಲ್ಲಾ’ ಸೋಂಕಿನಿಂದ ಬಳಲುತ್ತಿದ್ದ 34 ವರ್ಷದ ವೆಂಕೋಬ ಅವರು ರೊಬೊಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಸ್ಪೈನ್ ರೊಬೊಟ್’, ‘ಒ-ಆರ್ಮ್ ಇಂಟ್ರಾ ಆಪರೇಟಿವ್ ಇಮೇಜಿಂಗ್’, ‘ಸ್ಪೈನಲ್ ನ್ಯಾವಿಗೇಷನ್’ ಮತ್ತು ‘ನ್ಯೂರೋಮಾನಿಟರಿಂಗ್’ ಎಂಬ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು, ಮೂರು ಸಂಕೀರ್ಣ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<p>‘ಈಗಾಗಲೇ ಆಸ್ಪತ್ರೆಯು 10 ಸಾವಿರಕ್ಕೂ ಹೆಚ್ಚು ಯಶಸ್ವಿ ಮೂಳೆ ಶಸ್ತ್ರಚಿಕಿತ್ಸೆಗಳನ್ನು ನಡೆಸಿದೆ. ಸಂಕೀರ್ಣ ಬೆನ್ನುಮೂಳೆ ಸಮಸ್ಯೆಗಳನ್ನು ಹೊಂದಿರುವವರಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ’ ಎಂದು ಆಸ್ಪತ್ರೆಯ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ವಿಭಾಗದ ಸಲಹೆಗಾರ ಡಾ. ವಿನು ರಾಜ್ ಹೇಳಿದ್ದಾರೆ.</p>.<p>‘ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಹೊಂದಿದ್ದೆ. ಬೆನ್ನುಮೂಳೆ ಸಮಸ್ಯೆಯು ನನ್ನ ಕನಸಿಗೆ ಭಂಗವನ್ನುಂಟು ಮಾಡಿತ್ತು. ಸರಿಯಾಗಿ ನಡೆಯಲು ಸಾಧ್ಯವಾಗದೆ ನಿರಾಶಳಾಗಿದ್ದೆ. ಶಸ್ತ್ರಚಿಕಿತ್ಸೆಯ ಬಳಿಕ ದಿನದಿಂದ ದಿನಕ್ಕೆ ಬಲಿಷ್ಠಳಾಗುತ್ತಿದ್ದೇನೆ’ ಎಂದು ಉಷಾ ಎಚ್.ಎಂ. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ವೈದ್ಯರು ಬೆನ್ನುಮೂಳೆ ಸಮಸ್ಯೆಯಿಂದ ಬಳಲುತ್ತಿದ್ದ ಮೂವರಿಗೆ ರೊಬೊಟಿಕ್ ತಂತ್ರಜ್ಞಾನದ ನೆರವಿನಿಂದ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. </p>.<p>ಬೆನ್ನುಮೂಳೆ ಕ್ಷಯ ರೋಗದಿಂದ ಬಳಲುತ್ತಿದ್ದ 14 ವರ್ಷದ ಉಷಾ ಎಚ್.ಎಂ., ‘ಸ್ಕೋಲಿಯೋಸಿಸ್’ ಸಮಸ್ಯೆ ಎದುರಿಸುತ್ತಿದ್ದ 17 ವರ್ಷದ ಸಾಜಿಯಾ ಐಮನ್ ಮತ್ತು ‘ಬ್ರೂಸೆಲ್ಲಾ’ ಸೋಂಕಿನಿಂದ ಬಳಲುತ್ತಿದ್ದ 34 ವರ್ಷದ ವೆಂಕೋಬ ಅವರು ರೊಬೊಟಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಸ್ಪೈನ್ ರೊಬೊಟ್’, ‘ಒ-ಆರ್ಮ್ ಇಂಟ್ರಾ ಆಪರೇಟಿವ್ ಇಮೇಜಿಂಗ್’, ‘ಸ್ಪೈನಲ್ ನ್ಯಾವಿಗೇಷನ್’ ಮತ್ತು ‘ನ್ಯೂರೋಮಾನಿಟರಿಂಗ್’ ಎಂಬ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು, ಮೂರು ಸಂಕೀರ್ಣ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.</p>.<p>‘ಈಗಾಗಲೇ ಆಸ್ಪತ್ರೆಯು 10 ಸಾವಿರಕ್ಕೂ ಹೆಚ್ಚು ಯಶಸ್ವಿ ಮೂಳೆ ಶಸ್ತ್ರಚಿಕಿತ್ಸೆಗಳನ್ನು ನಡೆಸಿದೆ. ಸಂಕೀರ್ಣ ಬೆನ್ನುಮೂಳೆ ಸಮಸ್ಯೆಗಳನ್ನು ಹೊಂದಿರುವವರಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ’ ಎಂದು ಆಸ್ಪತ್ರೆಯ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ವಿಭಾಗದ ಸಲಹೆಗಾರ ಡಾ. ವಿನು ರಾಜ್ ಹೇಳಿದ್ದಾರೆ.</p>.<p>‘ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಹೊಂದಿದ್ದೆ. ಬೆನ್ನುಮೂಳೆ ಸಮಸ್ಯೆಯು ನನ್ನ ಕನಸಿಗೆ ಭಂಗವನ್ನುಂಟು ಮಾಡಿತ್ತು. ಸರಿಯಾಗಿ ನಡೆಯಲು ಸಾಧ್ಯವಾಗದೆ ನಿರಾಶಳಾಗಿದ್ದೆ. ಶಸ್ತ್ರಚಿಕಿತ್ಸೆಯ ಬಳಿಕ ದಿನದಿಂದ ದಿನಕ್ಕೆ ಬಲಿಷ್ಠಳಾಗುತ್ತಿದ್ದೇನೆ’ ಎಂದು ಉಷಾ ಎಚ್.ಎಂ. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>