<p><strong>ಯಲಹಂಕ:</strong> ‘ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸೇವೆಯನ್ನು ಇನ್ನಷ್ಟು ವಿಸ್ತರಿಸುವ ಮೂಲಕ ರೈತರು ಹಾಗೂ ಬಡಜನರ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.</p>.<p>ಜಕ್ಕೂರಿನಲ್ಲಿ ಆಯೋಜಿಸಿದ್ದ ಬ್ಯಾಟರಾಯನಪುರ ವ್ಯವಸಾಯ ಸೇವಾ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸಂಘಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಜತೆಗೆ ರೈತರು ಕೃಷಿ ಚಟುವಟಿಕೆ ನಡೆಸಲು ಹಾಗೂ ಬಡಜನರಿಗೆ ಸಾಲಸೌಲಭ್ಯ ಒದಗಿಸಿ ಅನುಕೂಲ ಮಾಡಿಕೊಡಬೇಕು’ ಎಂದರು.</p>.<p>‘ಸುದೀರ್ಘವಾದ ಇತಿಹಾಸವಿರುವ ಸಂಘವು ಈ ಭಾಗದಲ್ಲಿ ವ್ಯವಸಾಯ ಚಟುವಟಿಕೆಗಳು ಇದ್ದಾಗ ಆರಂಭವಾಗಿತ್ತು. ಇತ್ತೀಚೆಗೆ ಕಡಿಮೆಯಾಗಿದ್ದರೂ ಸಹ ಬದಲಾದ ಪರಿಸ್ಥಿತಿಯ ನಡುವೆಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಈ ಭಾಗದ ಜನರ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ₹6 ಕೋಟಿ ಠೇವಣಿ ಹೊಂದಿದ್ದು, ₹5.11 ಕೋಟಿ ಸಾಲ ನೀಡಿ, ₹23 ಲಕ್ಷ ಲಾಭದೊಂದಿಗೆ ಪ್ರಗತಿಯ ಹಾದಿಯಲ್ಲಿದೆ’ ಎಂದು ಶ್ಲಾಘಿಸಿದರು.</p>.<p>ಮನವಿ: ಸಂಘದ ಕಾರ್ಯಚಟುವಟಿಕೆಗಳಿಗಾಗಿ ಜಕ್ಕೂರಿನಲ್ಲಿ ಗುರುತಿಸಿರುವ 10 ಗುಂಟೆ ಭೂಮಿಯನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಸಚಿವ ಕೃಷ್ಣಬೈರೇಗೌಡರಿಗೆ ಮನವಿಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ರಾಜ್ಯದ ರೈತರ ಹಿತ ಕಾಪಾಡುವಲ್ಲಿ ಸಹಕಾರಿ ಸಂಘಗಳು ಮಹತ್ವದ ಪಾತ್ರ ವಹಿಸುತ್ತಿವೆ. ಈ ಸೇವೆಯನ್ನು ಇನ್ನಷ್ಟು ವಿಸ್ತರಿಸುವ ಮೂಲಕ ರೈತರು ಹಾಗೂ ಬಡಜನರ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.</p>.<p>ಜಕ್ಕೂರಿನಲ್ಲಿ ಆಯೋಜಿಸಿದ್ದ ಬ್ಯಾಟರಾಯನಪುರ ವ್ಯವಸಾಯ ಸೇವಾ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸಂಘಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಜತೆಗೆ ರೈತರು ಕೃಷಿ ಚಟುವಟಿಕೆ ನಡೆಸಲು ಹಾಗೂ ಬಡಜನರಿಗೆ ಸಾಲಸೌಲಭ್ಯ ಒದಗಿಸಿ ಅನುಕೂಲ ಮಾಡಿಕೊಡಬೇಕು’ ಎಂದರು.</p>.<p>‘ಸುದೀರ್ಘವಾದ ಇತಿಹಾಸವಿರುವ ಸಂಘವು ಈ ಭಾಗದಲ್ಲಿ ವ್ಯವಸಾಯ ಚಟುವಟಿಕೆಗಳು ಇದ್ದಾಗ ಆರಂಭವಾಗಿತ್ತು. ಇತ್ತೀಚೆಗೆ ಕಡಿಮೆಯಾಗಿದ್ದರೂ ಸಹ ಬದಲಾದ ಪರಿಸ್ಥಿತಿಯ ನಡುವೆಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಈ ಭಾಗದ ಜನರ ಸೇವೆಯನ್ನು ಮಾಡಿಕೊಂಡು ಬರುತ್ತಿದೆ. ₹6 ಕೋಟಿ ಠೇವಣಿ ಹೊಂದಿದ್ದು, ₹5.11 ಕೋಟಿ ಸಾಲ ನೀಡಿ, ₹23 ಲಕ್ಷ ಲಾಭದೊಂದಿಗೆ ಪ್ರಗತಿಯ ಹಾದಿಯಲ್ಲಿದೆ’ ಎಂದು ಶ್ಲಾಘಿಸಿದರು.</p>.<p>ಮನವಿ: ಸಂಘದ ಕಾರ್ಯಚಟುವಟಿಕೆಗಳಿಗಾಗಿ ಜಕ್ಕೂರಿನಲ್ಲಿ ಗುರುತಿಸಿರುವ 10 ಗುಂಟೆ ಭೂಮಿಯನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಸಚಿವ ಕೃಷ್ಣಬೈರೇಗೌಡರಿಗೆ ಮನವಿಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>