ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿರೋಟರಿ ಇಂದಿರಾನಗರ ನೀಡುವ 2020–21ನೇ ಸಾಲಿನ ‘ಜಿ.ಎಸ್.ಖನ್ನಾ ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿಗೆ ಇಂದಿರಾನಗರದ ಕಾವೇರಿ ಶಾಲೆಯ ಆರ್.ಗಾಯಿತ್ರಿ ಪಾತ್ರರಾಗಿದ್ದಾರೆ.
ಭಾನುವಾರ ನಡೆದ ಸಮಾರಂಭದಲ್ಲಿ ಗಾಯಿತ್ರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹಿಂದಿನ ಒಂದು ದಶಕದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಾಯಿತ್ರಿ, 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ವಿಧಾನಗಳ ಮೂಲಕ ಬೋಧನೆ ಮಾಡಿ ಶಾಲೆಯು ಉತ್ತಮ ಫಲಿತಾಂಶ ಪಡೆಯಲು ನೆರವಾಗಿದ್ದಾರೆ.