‘ಕೆರೆಯನ್ನು ಮೂರು ಹಂತಗಳಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮೊದಲು, ಕೆರೆಯಲ್ಲಿರುವ ಹೂಳನ್ನು ತೆಗೆದು ನೀರು ಸಂಗ್ರಹವಾಗುವಂತೆ ಮಾಡಲಾಗುವುದು. ನಂತರ, ಕೆರೆಯ ಮಣ್ಣನ್ನು ಕೃಷಿಕರ ತೋಟಗಳಿಗೆ ನೀಡಲಾಗುವುದು. ಇದರಿಂದ ಕೃಷಿ ಭೂಮಿ ಫಲವತ್ತತೆ ಪಡೆದುಕೊಳ್ಳುತ್ತದೆ. ಮೂರನೇ ಹಂತದಲ್ಲಿ, ಕೆರೆಯ ನೀರಿನ ಮಹತ್ವದ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುವುದು’ ಎಂದು ರೋಟರಿ ಕ್ಲಬ್ ಸದಸ್ಯ ಮಂಜುನಾಥ್ ತಿಳಿಸಿದರು.