ಕಾರ್ಯಕ್ರಮವನ್ನು ಉದ್ಘಾಟಿಸಿದ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ, ‘ವ್ಯಕ್ತಿಯೊಬ್ಬ ಆದರ್ಶವಾಗಿ ಹೇಗೆ ಬದುಕಬೇಕೆಂದು ಪುನೀತ್ ತೋರಿಸಿಕೊಟ್ಟಿದ್ದಾರೆ. ಬಲಗೈಯಿಂದ ದಾನ ಮಾಡಿದರೆ ಎಡಗೈಗೆ ತಿಳಿಯಬಾರದು ಎನ್ನುವ ನಿಯಮವನ್ನು ಪಾಲಿಸಿದವರು ಅವರು. ಅವರ ಸಿನಿಮಾಗಳು ಮನರಂಜನೆ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ’ ಎಂದರು.