ಅಪಹರಿಸಿದ ಬೈಕಿನಲ್ಲೇ ದರೋಡೆಕೋರ ಹೋಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಬೆನ್ನಟ್ಟಿದ ಪಿಎಸ್ಐ ಲಕ್ಷ್ಮಣ್ ಮತ್ತು ತಂಡಕ್ಕೆ, ಜಾಲಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಬಳಿ ಆರೋಪಿ ಭರತ್ ಕಾಣಿಸಿಕೊಂಡಿದ್ದ. ಕಾನ್ಸ್ಟೆಬಲ್ ಉಮೇಶ್ ಹಿಡಿಯಲು ಮುಂದಾಗುತ್ತಿದ್ದಂತೆ ಆರೋಪಿ ತನ್ನ ಬಳಿಯಲ್ಲಿದ್ದ ಡ್ರ್ಯಾಗರ್ನಿಂದ ಹಲ್ಲೆ ನಡೆಸಿದ್ದ. ಈ ವೇಳೆ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಲಕ್ಷ್ಮಣ್, ಶರಣಾಗುವಂತೆ ಸೂಚಿಸಿದ್ದಾರೆ. ಅಷ್ಟರಲ್ಲಿ, ತಮ್ಮ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.