<p><strong>ಬೆಂಗಳೂರು:</strong> ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ರೌಡಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಪಶ್ಚಿಮ ವಿಭಾಗದ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ರೌಡಿಗಳ ಮನೆಗಳ ಮೇಲೆ ರಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರು, ರೌಡಿಗಳನ್ನು ಭಾನುವಾರ ಬೆಳಿಗ್ಗೆ ಫ್ರೀಡಂ ಪಾರ್ಕ್ಗೆ ಕರೆದುಕೊಂಡು ಬಂದು ಪರೇಡ್ ನಡೆಸಿದರು.</p>.<p>ಪರೇಡ್ನಲ್ಲಿ ರೌಡಿಗಳಾದ ಗೊರಿಲ್ಲ ಅಲಿಯಾಸ್ ಶ್ರೀಧರ್, ತಿರುಮಲ ಅಲಿಯಾಸ್ ತಿಮ್ಮ, ಪುನೀತ್ ಅಲಿಯಾಸ್ ಚಿಕ್ಕ, ಧರಣಿ ಸೇರಿ ಅಪರಾಧ ಹಿನ್ನೆಲೆಯುಳ್ಳ 200ಕ್ಕೂ ಹೆಚ್ಚು ರೌಡಿಗಳಿಗೆ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗದೆ, ಸಮಾಜದಲ್ಲಿ ಉತ್ತಮ ಜೀವನ ನಡೆಸುವಂತೆ ಕಿವಿಮಾತು ಕೇಳಿದರು.</p>.<p>‘ಅಪರಾಧ ಕೃತ್ಯಗಳಲ್ಲಿ ತೊಡಗಿರುವುದು ಗೊತ್ತಾದರೆ ಕಠಿಣ ಕ್ರಮಕೈಗೊಳ್ಳುತ್ತೇವೆ’ ಎಂದು ಖಡಕ್ ಎಚ್ಚರಿಕೆ ನೀಡಿದ ಡಿಸಿಪಿ, ‘ಸದ್ಯ ಏನು ಕೆಲಸ ಮಾಡುತ್ತಿದ್ದೀರಿ’ ಎಂದು ರೌಡಿಗಳನ್ನು ಪ್ರಶ್ನಿಸಿದರು.</p>.<p>ಆಯಾ ವಿಭಾಗದ ಎಸಿಪಿಗಳು, ಇನ್ಸ್ಪೆಕ್ಟರ್ಗಳು ಮತ್ತು ಪೊಲೀಸ್ ಸಿಬ್ಬಂದಿ ರೌಡಿಗಳ ಮನೆ ವಿಳಾಸ, ಮೊಬೈಲ್ ಸಂಖ್ಯೆ, ಉದ್ಯೋಗ ಸೇರಿ ಇತರ ಮಾಹಿತಿ ಪಡೆದುಕೊಂಡರು.</p>.<p>ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡುವಂತೆ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ಇತ್ತೀಚೆಗೆ ಸೂಚಿಸಿದ್ದರು. ಅದರಂತೆ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವವರಿಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ರೌಡಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಪಶ್ಚಿಮ ವಿಭಾಗದ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ರೌಡಿಗಳ ಮನೆಗಳ ಮೇಲೆ ರಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪಶ್ಚಿಮ ವಿಭಾಗದ ಪೊಲೀಸರು, ರೌಡಿಗಳನ್ನು ಭಾನುವಾರ ಬೆಳಿಗ್ಗೆ ಫ್ರೀಡಂ ಪಾರ್ಕ್ಗೆ ಕರೆದುಕೊಂಡು ಬಂದು ಪರೇಡ್ ನಡೆಸಿದರು.</p>.<p>ಪರೇಡ್ನಲ್ಲಿ ರೌಡಿಗಳಾದ ಗೊರಿಲ್ಲ ಅಲಿಯಾಸ್ ಶ್ರೀಧರ್, ತಿರುಮಲ ಅಲಿಯಾಸ್ ತಿಮ್ಮ, ಪುನೀತ್ ಅಲಿಯಾಸ್ ಚಿಕ್ಕ, ಧರಣಿ ಸೇರಿ ಅಪರಾಧ ಹಿನ್ನೆಲೆಯುಳ್ಳ 200ಕ್ಕೂ ಹೆಚ್ಚು ರೌಡಿಗಳಿಗೆ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗದೆ, ಸಮಾಜದಲ್ಲಿ ಉತ್ತಮ ಜೀವನ ನಡೆಸುವಂತೆ ಕಿವಿಮಾತು ಕೇಳಿದರು.</p>.<p>‘ಅಪರಾಧ ಕೃತ್ಯಗಳಲ್ಲಿ ತೊಡಗಿರುವುದು ಗೊತ್ತಾದರೆ ಕಠಿಣ ಕ್ರಮಕೈಗೊಳ್ಳುತ್ತೇವೆ’ ಎಂದು ಖಡಕ್ ಎಚ್ಚರಿಕೆ ನೀಡಿದ ಡಿಸಿಪಿ, ‘ಸದ್ಯ ಏನು ಕೆಲಸ ಮಾಡುತ್ತಿದ್ದೀರಿ’ ಎಂದು ರೌಡಿಗಳನ್ನು ಪ್ರಶ್ನಿಸಿದರು.</p>.<p>ಆಯಾ ವಿಭಾಗದ ಎಸಿಪಿಗಳು, ಇನ್ಸ್ಪೆಕ್ಟರ್ಗಳು ಮತ್ತು ಪೊಲೀಸ್ ಸಿಬ್ಬಂದಿ ರೌಡಿಗಳ ಮನೆ ವಿಳಾಸ, ಮೊಬೈಲ್ ಸಂಖ್ಯೆ, ಉದ್ಯೋಗ ಸೇರಿ ಇತರ ಮಾಹಿತಿ ಪಡೆದುಕೊಂಡರು.</p>.<p>ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ನೀಡುವಂತೆ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ಇತ್ತೀಚೆಗೆ ಸೂಚಿಸಿದ್ದರು. ಅದರಂತೆ, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವವರಿಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>