ಬೆಂಗಳೂರು: ಜನರಿಗೆ ಮಚ್ಚು ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ರೌಡಿ ಸೈಯದ್ ಮಾಜಾರ್ ಅಲಿಯಾಸ್ ಬಚ್ಚಾನನ್ನು (30) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಶಿವಾಜಿನಗರದ ಬಚ್ಚಾ, ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ, ದರೋಡೆ, ಗಲಭೆ ಸೇರಿದಂತೆ 17 ಪ್ರಕರಣಗಳಲ್ಲಿ ಆರೋಪಿ. ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ’ ಎಂದು ಪೊಲೀಸರು ಹೇಳಿದರು.
‘ಠಾಣೆ ವ್ಯಾಪ್ತಿಯ ಕೆಲ ವ್ಯಾಪಾರಿಗಳ ಬಳಿ ಹೋಗಿದ್ದ ರೌಡಿ, ಮಾರಕಾಸ್ತ್ರ ತೋರಿಸಿದ್ದ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಹೇಳಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿ ರೌಡಿಯನ್ನು ವಶಕ್ಕೆ ಪಡೆದಿದ್ದರು’ ಎಂದರು.