ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರ ತೋರಿಸಿ ಬೆದರಿಕೆ: ರೌಡಿ ಬಂಧನ

Published 23 ಏಪ್ರಿಲ್ 2024, 16:00 IST
Last Updated 23 ಏಪ್ರಿಲ್ 2024, 16:00 IST
ಅಕ್ಷರ ಗಾತ್ರ

ಬೆಂಗಳೂರು: ಜನರಿಗೆ ಮಚ್ಚು ತೋರಿಸಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ರೌಡಿ ಸೈಯದ್ ಮಾಜಾರ್ ಅಲಿಯಾಸ್ ಬಚ್ಚಾನನ್ನು (30) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಶಿವಾಜಿನಗರದ ಬಚ್ಚಾ, ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ, ದರೋಡೆ, ಗಲಭೆ ಸೇರಿದಂತೆ 17 ಪ್ರಕರಣಗಳಲ್ಲಿ ಆರೋಪಿ. ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ಕೆಲ ವ್ಯಾಪಾರಿಗಳ ಬಳಿ ಹೋಗಿದ್ದ ರೌಡಿ, ಮಾರಕಾಸ್ತ್ರ ತೋರಿಸಿದ್ದ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಹೇಳಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿ ರೌಡಿಯನ್ನು ವಶಕ್ಕೆ ಪಡೆದಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT