ಕೊಲೆ, ಕೊಲೆಯತ್ನ, ದರೋಡೆ, ಭೂ ಅತಿಕ್ರಮಣ, ಪೊಲೀಸರ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳು ಸ್ಲಂ ಭರತನ ಮೇಲೆ ದಾಖಲಾಗಿವೆ. ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ಮಾದನಾಯಕನಹಳ್ಳಿ ಸೇರಿದಂತೆ ವಿವಿಧ ಠಾಣೆಗಳ ರೌಡಿಪಟ್ಟಿಯಲ್ಲಿ ಈತನ ಹೆಸರಿದೆ. 150ಕ್ಕೂ ಹೆಚ್ಚು ಸಹಚರರನ್ನು ಜೊತೆಯಲ್ಲಿ ಇಟ್ಟುಕೊಂಡು ಭೂಗತಲೋಕವನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಈತ ಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದರು.