ಸುಲಿಗೆ, ಹಲ್ಲೆ, ಮೀಟರ್ ಬಡ್ಡಿ ದಂಧೆ ಸೇರಿದಂತೆ ಯಶಸ್ವಿನಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಸುಬ್ರಹ್ಮಣ್ಯಪುರ ಠಾಣೆಯ ರೌಡಿಗಳ ಪಟ್ಟಿಯಲ್ಲೂ ಅವರ ಹೆಸರಿದೆ. ಇಂಥ ಹಿನ್ನೆಲೆವುಳ್ಳವರಿಗೆ ಅಧಿಕಾರ ಕೊಟ್ಟಿರುವುದು ಎಷ್ಟು ಸರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.