ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎದುರಾಳಿ ಹತ್ಯೆಗೆ ಸಂಚು; ರೌಡಿ ಗ್ಯಾಂಗ್ ಸೆರೆ

Last Updated 8 ಏಪ್ರಿಲ್ 2021, 22:01 IST
ಅಕ್ಷರ ಗಾತ್ರ

ಬೆಂಗಳೂರು: ಎದುರಾಳಿಯನ್ನು ಹತ್ಯೆ ಮಾಡಿ ಸುಲಿಗೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ರೌಡಿ ರೋಹಿತ್ ಅಲಿಯಾಸ್ ಕಾಡುಬಿಸನಹಳ್ಳಿ ರೋಹಿತ್‌ಗೌಡ (29) ಹಾಗೂ ಆತನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕಾಡುಬಿಸನಹಳ್ಳಿಯ ರೌಡಿ ಸೋಮನನ್ನು ಹತ್ಯೆ ಮಾಡಲು ಆರೋಪಿಗಳು ಸಂಚು ರೂಪಿಸಿದ್ದರು. ಬಂಧಿತ ಆರೋಪಿಗಳಿಂದ ಪಿಸ್ತೂಲ್, ಜೀವಂತ ಗುಂಡು, 10 ಮಚ್ಚುಗಳು ಹಾಗೂ 2 ಕಾರುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ಎರಡು ವರ್ಷಗಳ ದ್ವೇಷ: ‘ರೌಡಿ ರೋಹಿತ್‌ನ ಅಣ್ಣನನ್ನು 2018ರಲ್ಲಿ ಕೊಲೆ ಮಾಡಲಾಗಿತ್ತು. ಇದರಲ್ಲಿ ರೌಡಿ ಸೋಮನ ಹೆಸರು ಕೇಳಿಬಂದಿತ್ತು. ಮರು ವರ್ಷವೇ ಸೋಮನ ತಮ್ಮ ಮಂಜನ ಕೊಲೆಯಾಗಿತ್ತು. ಅದರಲ್ಲಿ ರೋಹಿತ್ ಹೆಸರು ಕೇಳಿಬಂದಿತ್ತು’ ಎಂದು ಪೊಲೀಸರು ತಿಳಿಸಿದರು.

‘ಸೋಮ ಹಾಗೂ ರೋಹಿತ್ ನಡುವೆ ಎರಡು ವರ್ಷಗಳಿಂದ ಗಲಾಟೆ ನಡೆಯುತ್ತಿತ್ತು. ಒಬ್ಬರಿಗೊಬ್ಬರು ಹತ್ಯೆ ಮಾಡಲು ತೆರೆಮರೆಯಲ್ಲಿ ಸಂಚು ರೂಪಿಸುತ್ತಲೇ ಇದ್ದರು’ ಎಂದರು.

ಗ್ಯಾಂಗ್ ಕಟ್ಟಿದ್ದ ರೋಹಿತ್: ‘ರೌಡಿ ಅಮರನಾಥ್‌, ಮುನಿರಾಜು, ವಿಘ್ನೇಶ್, ಕಾಂತರಾಜು, ಹರೀಶ್, ಪ್ರಶಾಂತ್‌ಕುಮಾರ್, ಜಮೀರ್, ಚಂದನ್, ಗಂಗರಾಜು, ಮಂಜುನಾಥ್‌ನನ್ನು ಸೇರಿಸಿಕೊಂಡು ರೋಹಿತ್ ಗ್ಯಾಂಗ್ ಕಟ್ಟಿದ್ದ’ ಎಂದೂ ಪೊಲೀಸರು ಹೇಳಿದರು.

‘ಗುರುವಾರ ಬೆಳಿಗ್ಗೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಮಲ್ಲಸಂದ್ರದಿಂದ ರವೀಂದ್ರನಗರದತ್ತ ಹೋಗುವ ರಸ್ತೆಯಲ್ಲಿ ಆರೋಪಿಗಳು ನಿಂತಿದ್ದರು. ಅದೇ ರಸ್ತೆಯಲ್ಲೇ ಸೋಮ ಬರುವುದನ್ನು ಕಾಯುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT