ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತು ಕೊಯ್ದು ರೌಡಿ ಕೊಲೆ

Last Updated 30 ಮೇ 2019, 20:25 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಜಿ.ಹಳ್ಳಿಯ ಇದಾಯತ್ ನಗರದಲ್ಲಿ ರೌಡಿ ಸ್ಟೀಫನ್ (28) ಎಂಬಾತನನ್ನು ಕತ್ತು ಕೊಯ್ದು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ.

‘ಲಿಂಗರಾಜಪುರ ನಿವಾಸಿ ಆಗಿದ್ದ ಸ್ಟೀಫನ್, ಕೆ.ಜಿ.ಹಳ್ಳಿ ಠಾಣೆಯ ರೌಡಿ ಶೀಟರ್. ಸಹೋದರನ ಆಟೊ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ರಾತ್ರಿ ಮನೆಗೆ ಹೊರಟಿದ್ದ ಸ್ಟೀಫನ್‌ನನ್ನು ದುಷ್ಕರ್ಮಿಗಳು, ಕತ್ತು ಕೊಯ್ದು ಕಿವಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ನಂತರ, ಶವವನ್ನು ಆಟೊದ ಹಿಂಬದಿ ಸೀಟಿನಲ್ಲಿ ಹಾಕಿ ಪರಾರಿಯಾಗಿದ್ದಾರೆ.’

‘ನಸುಕಿನಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಆಟೊದಲ್ಲಿ ರಕ್ತ ಸೋರುತ್ತಿತ್ತು. ಅದನ್ನು ಗಮನಿಸಿದ್ದ ಸ್ಥಳೀಯೊಬ್ಬರು ಆಟೊ ಬಳಿ ಹೋಗಿ ನೋಡಿದಾಗ ಶವ ಕಂಡಿತ್ತು. ಸ್ಥಳಕ್ಕೆ ಹೋಗಿ ಶವವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಹಳೇ ವೈಷಮ್ಯದಿಂದಾಗಿ ಈ ಕೊಲೆ ನಡೆದಿರುವ ಶಂಕೆ ಇದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT