<p><strong>ಬೆಂಗಳೂರು</strong>: ಡಿ.ಜೆ.ಹಳ್ಳಿ ಠಾಣೆಯ ರೌಡಿಶೀಟರ್ ಸೂರ್ಯ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಮ್ರಾನ್ ಅಲಿಯಾಸ್ ಮಿರ್ಚಿ (22), ತೌಫಿಕ್ (26), ಮೈಕಲ್ (25), ಯೂಸುಫ್ (26), ರಾಜು ಹಾಗೂ ಸುರೇಶ್ ಬಂಧಿತರು.</p>.<p>‘ಬಾಗಲೂರು ನಿವಾಸಿಯಾದ ಸೂರ್ಯನನ್ನು ಆರೋಪಿಗಳು ಡಿ. 26ರಂದು ರಾತ್ರಿ ಔತಣಕೂಟಕ್ಕೆ ಕರೆದಿದ್ದರು. ಗೋವಿಂದಪುರದ ಶ್ಯಾಂಪುರ ರೈಲ್ವೆ ಗೇಟ್ ಸಮೀಪ ಆತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕಳೆದ ವರ್ಷ ರೌಡಿ ಚಾರ್ಲ್ಸ್ ಕುಮಾರ್ ಎಂಬಾತನ ಕೊಲೆ ಆಗಿತ್ತು. ಆ ಪ್ರಕರಣದಲ್ಲಿ ಸೂರ್ಯನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿದ್ದ ಸೂರ್ಯ ವಾರದ ಹಿಂದಷ್ಟೇ ಬಿಡುಗಡೆ ಆಗಿದ್ದ.’</p>.<p>‘ಚಾರ್ಲ್ಸ್ ಕುಮಾರ್ನ ಸಹಚರರಾಗಿರುವ ಆರೋಪಿಗಳು, ಸೂರ್ಯನನ್ನು ಔತಣಕೂಟಕ್ಕೆ ಆಹ್ವಾನಿಸಿ ಕೊಲೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಿ.ಜೆ.ಹಳ್ಳಿ ಠಾಣೆಯ ರೌಡಿಶೀಟರ್ ಸೂರ್ಯ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇಮ್ರಾನ್ ಅಲಿಯಾಸ್ ಮಿರ್ಚಿ (22), ತೌಫಿಕ್ (26), ಮೈಕಲ್ (25), ಯೂಸುಫ್ (26), ರಾಜು ಹಾಗೂ ಸುರೇಶ್ ಬಂಧಿತರು.</p>.<p>‘ಬಾಗಲೂರು ನಿವಾಸಿಯಾದ ಸೂರ್ಯನನ್ನು ಆರೋಪಿಗಳು ಡಿ. 26ರಂದು ರಾತ್ರಿ ಔತಣಕೂಟಕ್ಕೆ ಕರೆದಿದ್ದರು. ಗೋವಿಂದಪುರದ ಶ್ಯಾಂಪುರ ರೈಲ್ವೆ ಗೇಟ್ ಸಮೀಪ ಆತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕಳೆದ ವರ್ಷ ರೌಡಿ ಚಾರ್ಲ್ಸ್ ಕುಮಾರ್ ಎಂಬಾತನ ಕೊಲೆ ಆಗಿತ್ತು. ಆ ಪ್ರಕರಣದಲ್ಲಿ ಸೂರ್ಯನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿದ್ದ ಸೂರ್ಯ ವಾರದ ಹಿಂದಷ್ಟೇ ಬಿಡುಗಡೆ ಆಗಿದ್ದ.’</p>.<p>‘ಚಾರ್ಲ್ಸ್ ಕುಮಾರ್ನ ಸಹಚರರಾಗಿರುವ ಆರೋಪಿಗಳು, ಸೂರ್ಯನನ್ನು ಔತಣಕೂಟಕ್ಕೆ ಆಹ್ವಾನಿಸಿ ಕೊಲೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>