‘ಬಾಗಲೂರು ನಿವಾಸಿಯಾದ ಸೂರ್ಯನನ್ನು ಆರೋಪಿಗಳು ಡಿ. 26ರಂದು ರಾತ್ರಿ ಔತಣಕೂಟಕ್ಕೆ ಕರೆದಿದ್ದರು. ಗೋವಿಂದಪುರದ ಶ್ಯಾಂಪುರ ರೈಲ್ವೆ ಗೇಟ್ ಸಮೀಪ ಆತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು’ ಎಂದು ಪೊಲೀಸರು ಹೇಳಿದರು.
‘ಕಳೆದ ವರ್ಷ ರೌಡಿ ಚಾರ್ಲ್ಸ್ ಕುಮಾರ್ ಎಂಬಾತನ ಕೊಲೆ ಆಗಿತ್ತು. ಆ ಪ್ರಕರಣದಲ್ಲಿ ಸೂರ್ಯನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಲ್ಲಿದ್ದ ಸೂರ್ಯ ವಾರದ ಹಿಂದಷ್ಟೇ ಬಿಡುಗಡೆ ಆಗಿದ್ದ.’
‘ಚಾರ್ಲ್ಸ್ ಕುಮಾರ್ನ ಸಹಚರರಾಗಿರುವ ಆರೋಪಿಗಳು, ಸೂರ್ಯನನ್ನು ಔತಣಕೂಟಕ್ಕೆ ಆಹ್ವಾನಿಸಿ ಕೊಲೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.