ಕ್ರೀಡಾಂಗಣದ ಎದುರಿನಲ್ಲಿರುವ ಬಿಬಿಎಂಪಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಅರವಿಂದ್ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿದ್ದರು. ತಪ್ಪಿಸಿಕೊಂಡಿದ್ದ ಅರವಿಂದ್, ಕೆಎಸ್ಎಫ್ಎ ಕ್ರೀಡಾಂಗಣದೊಳಗೆ ಹೋಗಿದ್ದ. ಬೆನ್ನಟ್ಟಿದ್ದ ದುಷ್ಕರ್ಮಿಗಳು, ಕ್ರೀಡಾಂಗಣದ ಕೊಠಡಿಯಲ್ಲೇ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು.