<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ (ಕೆಎಸ್ಎಫ್ಎ) ಕ್ರೀಡಾಂಗಣದಲ್ಲಿ ನಡೆದಿರುವ ರೌಡಿ ಅರವಿಂದ್ (27) ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಅಶೋಕನಗರ ಪೊಲೀಸರು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>ಕ್ರೀಡಾಂಗಣದ ಎದುರಿನಲ್ಲಿರುವ ಬಿಬಿಎಂಪಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಅರವಿಂದ್ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿದ್ದರು. ತಪ್ಪಿಸಿಕೊಂಡಿದ್ದ ಅರವಿಂದ್, ಕೆಎಸ್ಎಫ್ಎ ಕ್ರೀಡಾಂಗಣದೊಳಗೆ ಹೋಗಿದ್ದ. ಬೆನ್ನಟ್ಟಿದ್ದ ದುಷ್ಕರ್ಮಿಗಳು, ಕ್ರೀಡಾಂಗಣದ ಕೊಠಡಿಯಲ್ಲೇ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು.</p>.<p>ಘಟನಾ ಸ್ಥಳದಲ್ಲಿ ಶ್ವಾನದಳ ಸಿಬ್ಬಂದಿ ಸೋಮವಾರ ತಪಾಸಣೆ ನಡೆಸಿದರು. ಮೈದಾನ ಹಾಗೂ ಕ್ರೀಡಾಂಗಣದ ಹಲವೆಡೆ ಶ್ವಾನ ಓಡಾಡಿತು. ಅದನ್ನು ಪೊಲೀಸರು ಚಿತ್ರೀಕರಿಸಿಕೊಂಡರು.</p>.<p>‘ಹಳೇ ವೈಷಮ್ಯದಿಂದಾಗಿ ಕೊಲೆ ನಡೆದಿರುವ ಅನುಮಾನವಿದೆ. ಆದರೆ, ಆರೋಪಿಗಳು ಯಾರು ಎಂಬುದಕ್ಕೆ ನಿಖರ ಪುರಾವೆಗಳು ಸಿಕ್ಕಿಲ್ಲ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಘಟನಾ ಸ್ಥಳ ಹಾಗೂ ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳು ಮಾರಕಾಸ್ತ್ರ ಹಿಡಿದು, ಅರವಿಂದ್ನನ್ನು ಬೆನ್ನಟ್ಟಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಆರೋಪಿಗಳ ಮುಖ ಸ್ಪಷ್ಟವಾಗಿಲ್ಲ. ಅವರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ (ಕೆಎಸ್ಎಫ್ಎ) ಕ್ರೀಡಾಂಗಣದಲ್ಲಿ ನಡೆದಿರುವ ರೌಡಿ ಅರವಿಂದ್ (27) ಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಅಶೋಕನಗರ ಪೊಲೀಸರು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>ಕ್ರೀಡಾಂಗಣದ ಎದುರಿನಲ್ಲಿರುವ ಬಿಬಿಎಂಪಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಅರವಿಂದ್ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿದ್ದರು. ತಪ್ಪಿಸಿಕೊಂಡಿದ್ದ ಅರವಿಂದ್, ಕೆಎಸ್ಎಫ್ಎ ಕ್ರೀಡಾಂಗಣದೊಳಗೆ ಹೋಗಿದ್ದ. ಬೆನ್ನಟ್ಟಿದ್ದ ದುಷ್ಕರ್ಮಿಗಳು, ಕ್ರೀಡಾಂಗಣದ ಕೊಠಡಿಯಲ್ಲೇ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದರು.</p>.<p>ಘಟನಾ ಸ್ಥಳದಲ್ಲಿ ಶ್ವಾನದಳ ಸಿಬ್ಬಂದಿ ಸೋಮವಾರ ತಪಾಸಣೆ ನಡೆಸಿದರು. ಮೈದಾನ ಹಾಗೂ ಕ್ರೀಡಾಂಗಣದ ಹಲವೆಡೆ ಶ್ವಾನ ಓಡಾಡಿತು. ಅದನ್ನು ಪೊಲೀಸರು ಚಿತ್ರೀಕರಿಸಿಕೊಂಡರು.</p>.<p>‘ಹಳೇ ವೈಷಮ್ಯದಿಂದಾಗಿ ಕೊಲೆ ನಡೆದಿರುವ ಅನುಮಾನವಿದೆ. ಆದರೆ, ಆರೋಪಿಗಳು ಯಾರು ಎಂಬುದಕ್ಕೆ ನಿಖರ ಪುರಾವೆಗಳು ಸಿಕ್ಕಿಲ್ಲ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಘಟನಾ ಸ್ಥಳ ಹಾಗೂ ಸುತ್ತಮುತ್ತಲ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳು ಮಾರಕಾಸ್ತ್ರ ಹಿಡಿದು, ಅರವಿಂದ್ನನ್ನು ಬೆನ್ನಟ್ಟಿದ್ದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಆರೋಪಿಗಳ ಮುಖ ಸ್ಪಷ್ಟವಾಗಿಲ್ಲ. ಅವರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>