‘ಸಹಚರರ ಬಳಿ ನಗದು ಇರಲಿಲ್ಲ. ಗೂಗಲ್ ಪೇ ಮಾಡುವುದಾಗಿ ಹೇಳಿದ್ದರು. ಆದರೆ, ನಗದು ಮಾತ್ರ ಸ್ವೀಕರಿಸುವುದಾಗಿ ಸಿಬ್ಬಂದಿ ತಿಳಿಸಿದ್ದರು. ಹಣ ಡ್ರಾ ಮಾಡಿಕೊಂಡು ಬರುವುದಾಗಿ ಹೇಳಿ ಸಹಚರರು, ಎಟಿಎಂ ಘಟಕಕ್ಕೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಸರ್ವೀಸ್ ಅಪಾರ್ಟ್ಮೆಂಟ್ಗೆ ನುಗ್ಗಿದ್ದ ಆರೋಪಿಗಳು, ದಿನೇಶ್ನನ್ನು ಕೊಂದು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.