‘ಹೆಣ್ಣೂರು, ದೊಡ್ಡಬಳ್ಳಾಪುರ, ಕೆ.ಜಿ.ಹಳ್ಳಿ, ಸಂಪಿಗೆಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ, ಕೊಲೆ ಯತ್ನ ಹಾಗೂ ಕೊಲೆ ಪ್ರಕರಣಗಳಲ್ಲಿ ತನ್ವೀರ್ ಭಾಗಿಯಾಗಿದ್ದ. ಹಲವು ಬಾರಿ ಜೈಲಿಗೂ ಹೋಗಿದ್ದ. ಹತ್ತು ದಿನಗಳ ಹಿಂದಷ್ಟೇ ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ. ಆತನನ್ನು ಹಿಂಬಾಲಿಸಿಯೇ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ’ ಎಂದೂ ತಿಳಿಸಿದರು.