‘ಲಗ್ಗೆರೆ ಕಸ್ತೂರಿನಗರದ ಬಸಪ್ಪ ಕಟ್ಟೆ ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೀನ ಹೊರಟಿದ್ದ. ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿದ್ದ ಶ್ರೀನಿವಾಸ್ನನ್ನು ಸ್ಥಳೀಯರು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಸ್ಥಳದಲ್ಲೇ ಆತ ಮೃತಪಟ್ಟಿರುವಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ತಿಳಿಸಿದರು.