‘ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತ್ಯನಾದನ್ ಜೈಲಿಗೂ ಹೋಗಿ ಬಂದಿದ್ದ. ಈತನ ವಿರುದ್ಧದ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಸೈಕಲ್ ರವಿ ಹಾಗೂ ಬೇಕರಿ ರಘು ನೀಡಿದ್ದ ಪಿಸ್ತೂಲ್ ತನ್ನ ಬಳಿ ಇಟ್ಟುಕೊಂಡಿದ್ದ ಸತ್ಯನಾದನ್, ಅದನ್ನು ತೋರಿಸಿ ಜನರನ್ನು ಬೆದರಿಸುತ್ತಿದ್ದ. ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದರು.