<p><strong>ಬೆಂಗಳೂರು:</strong> ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಡೈನಮೈಟ್ ಖಲೀಲ್ನನ್ನು ಬುಧವಾರ ರಾತ್ರಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿಸಲು ತೆರಳಿದ ಕೆ.ಜಿ. ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ನೇತೃತ್ವದ ತಂಡದ ಮೇಲೆ, ಶಾರ್ಪ್ ಶೂಟರ್ ಕೂಡಾ ಆಗಿರುವ<br />ಖಲೀಲ್ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಅಜಯ್ ಸಾರಥಿ ಅವರು ಖಲೀಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಆರು ತಿಂಗಳ ಹಿಂದೆ ಚಟ್ನಿ ಸಲೀಂ ಮತ್ತು ಜುಬೇರ್ ಎಂಬಿಬ್ಬರ ಮೇಲೆ ಗುಂಡು ಹಾರಿಸಿದ್ದ ಖಲೀಲ್, ಪೊಲೀಸ ರ ಕೈಗೆ ಸಿಗದೆ ಓಡಾಡುತ್ತಿದ್ದ. ಬುಧವಾರ ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯ ಈರುಳ್ಳಿ ಗಾರ್ಡನ್ ಬಳಿ ಖಲೀಲ್ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.</p>.<p>ಖಲೀಲ್ನ ಎರಡೂ ಕಾಲುಗಳಿಗೆ ಗುಂಡೇಟು ತಗಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಲೀಲ್ ಹಲ್ಲೆ ನಡೆಸಿದ್ದರಿಂದ ಕಾನ್ಸ್ಟೆಬಲ್ಗೂ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಡೈನಮೈಟ್ ಖಲೀಲ್ನನ್ನು ಬುಧವಾರ ರಾತ್ರಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿಸಲು ತೆರಳಿದ ಕೆ.ಜಿ. ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ನೇತೃತ್ವದ ತಂಡದ ಮೇಲೆ, ಶಾರ್ಪ್ ಶೂಟರ್ ಕೂಡಾ ಆಗಿರುವ<br />ಖಲೀಲ್ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಅಜಯ್ ಸಾರಥಿ ಅವರು ಖಲೀಲ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಆರು ತಿಂಗಳ ಹಿಂದೆ ಚಟ್ನಿ ಸಲೀಂ ಮತ್ತು ಜುಬೇರ್ ಎಂಬಿಬ್ಬರ ಮೇಲೆ ಗುಂಡು ಹಾರಿಸಿದ್ದ ಖಲೀಲ್, ಪೊಲೀಸ ರ ಕೈಗೆ ಸಿಗದೆ ಓಡಾಡುತ್ತಿದ್ದ. ಬುಧವಾರ ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯ ಈರುಳ್ಳಿ ಗಾರ್ಡನ್ ಬಳಿ ಖಲೀಲ್ ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.</p>.<p>ಖಲೀಲ್ನ ಎರಡೂ ಕಾಲುಗಳಿಗೆ ಗುಂಡೇಟು ತಗಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಲೀಲ್ ಹಲ್ಲೆ ನಡೆಸಿದ್ದರಿಂದ ಕಾನ್ಸ್ಟೆಬಲ್ಗೂ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>