<p><strong>ಬೆಂಗಳೂರು:</strong> ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸಹದೇವನನ್ನು (32) ಮಾರಕಾಸ್ತ್ರಗಳಿಂದ ಹೊಡೆದು ಬುಧವಾರ ರಾತ್ರಿ ಕೊಲೆ ಮಾಡಲಾಗಿದ್ದು, ವೈಷಮ್ಯದಿಂದಾಗಿ ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.</p>.<p>‘ಸ್ಥಳೀಯ ನಿವಾಸಿ ಸಹದೇವ್, ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಚಹಾ ಕುಡಿಯಲು ಅಂಗಡಿಯೊಂದಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ಮೂರು ಬೈಕ್ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಸಹದೇವ್ ಆರೋಪಿಯಾಗಿದ್ದ. ಕೋಣನಕುಂಟೆ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿತ್ತು’ ಎಂದು ತಿಳಿಸಿವೆ.</p>.<p>‘ಸ್ಥಳೀಯ ಪರಿಚಯಸ್ಥರ ಜೊತೆ ಸಹದೇವ್ ಜಗಳ ಮಾಡಿದ್ದನೆಂಬ ಮಾಹಿತಿಯಿದೆ. ಇದೇ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ’ ಎಂದು ಹೇಳಿವೆ.</p>.ಬೆಂಗಳೂರು: 20 ಬಾರಿ ಇರಿದು ರೌಡಿ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೌಡಿ ಸಹದೇವನನ್ನು (32) ಮಾರಕಾಸ್ತ್ರಗಳಿಂದ ಹೊಡೆದು ಬುಧವಾರ ರಾತ್ರಿ ಕೊಲೆ ಮಾಡಲಾಗಿದ್ದು, ವೈಷಮ್ಯದಿಂದಾಗಿ ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.</p>.<p>‘ಸ್ಥಳೀಯ ನಿವಾಸಿ ಸಹದೇವ್, ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಚಹಾ ಕುಡಿಯಲು ಅಂಗಡಿಯೊಂದಕ್ಕೆ ಬಂದಿದ್ದ. ಇದೇ ಸಂದರ್ಭದಲ್ಲಿ ಮೂರು ಬೈಕ್ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಸಹದೇವ್ ಆರೋಪಿಯಾಗಿದ್ದ. ಕೋಣನಕುಂಟೆ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿತ್ತು’ ಎಂದು ತಿಳಿಸಿವೆ.</p>.<p>‘ಸ್ಥಳೀಯ ಪರಿಚಯಸ್ಥರ ಜೊತೆ ಸಹದೇವ್ ಜಗಳ ಮಾಡಿದ್ದನೆಂಬ ಮಾಹಿತಿಯಿದೆ. ಇದೇ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ’ ಎಂದು ಹೇಳಿವೆ.</p>.ಬೆಂಗಳೂರು: 20 ಬಾರಿ ಇರಿದು ರೌಡಿ ಕೊಲೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>