ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರಮಂಗಲದ ಬ್ಯಾಂಕ್‌ನಲ್ಲಿ ರೌಡಿ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು

Last Updated 21 ಜುಲೈ 2021, 3:43 IST
ಅಕ್ಷರ ಗಾತ್ರ

ಬೆಂಗಳೂರು: ಕೋರಮಂಗಲದ ಬ್ಯಾಂಕೊಂದರಲ್ಲಿ ನಡೆದಿದ್ದ ರೌಡಿ ಜೋಸೆಫ್ ಅಲಿಯಾಸ್ ಬಬ್ಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಜೊತೆ ಬ್ಯಾಂಕ್‌ಗೆ ಬಂದಿದ್ದ ಬಬ್ಲಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪತ್ನಿ ಕೈಗೂ ಮಾರಕಾಸ್ತ್ರದಿಂದ ಹೊಡೆಯಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಆರೋಪಿಗಳಾದ ಪ್ರದೀಪ್ ಅಲಿಯಾಸ್ ಚೋಟೆ ಹಾಗೂ ರವಿ ಬುಧವಾರ ನಸುಕಿನಲ್ಲಿ ಬೇಗೂರು ಕೆರೆ ಬಳಿ ಕಾಣಿಸಿಕೊಂಡಿದ್ದರು. ಪೊಲೀಸರ ತಂಡ ಸ್ಥಳಕ್ಕೆ ಹೋಗಿ ಆರೋಪಿಗಳ ಬಂಧನಕ್ಕೆ ಮುಂದಾಗಿದ್ದತ್ತು. ಅದೇ ಸಂದರ್ಭದಲ್ಲಿ ಆರೋಪಿಗಳು, ಪಿಎಸ್ಐ ಹಾಗೂ ಎಎಸ್ಐ ಮೇಲೆ ಹಲ್ಲೆ ಮಾಡಿದ್ದರು. ರಕ್ಷಣೆಗೆ ಹೋದ ಇನ್‌ಸ್ಪೆಕ್ಟರ್, ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

‘ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ವಿಚಾರಣೆ ನಡೆಸಬೇಕಿದೆ. ಅವಾಗಲೇ ಬಬ್ಲಿ ಕೊಲೆಗೆ ನಿಖರ ಕಾರಣ ತಿಳಿಯಲಿದೆ’ ಎಂದು ಪೊಲೀಸರು ಹೇಳಿದರು.

‘ಗಾಯಗೊಂಡಿರುವ ಪಿಎಸ್ಐ ಹಾಗೂ ಎಎಸ್ಐ ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT